ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ಲಡಾಖ್ ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ರೂಪಿಸುವ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ‘ಜನರು ನಿಮಗೆ ಕೊಟ್ಟ ಅಧಿಕಾರವನ್ನು ಕೆಟ್ಟದಾಗಿ ಬಳಸಿದ್ದೀರಿ. ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹರಿದುಹಾಕಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಏಕಪಕ್ಷೀಯವಾಗಿ ಕಾಶ್ಮೀರವನ್ನು ಹರಿದುಹಾಕಿದ್ದರಿಂದ, ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಬಂಧಿಸಿದ್ದರಿಂದ, ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ್ದರಿಂದ ರಾಷ್ಟ್ರೀಯ ಏಕತೆ ವೃದ್ಧಿಯಾಗಿಲ್ಲ. ಈ ದೇಶವು ಜನರಿಂದ ರೂಪುಗೊಂಡಿದೆ. ಭೂಮಿಯ ತುಂಡುಗಳಿಂದ ಅಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.
ಜಮ್ಮುಕಾಶ್ಮೀರ ಜನತೆಯ ಹಿತಾಸಕ್ತಿಯನ್ನು ಕಡೆಗಣಿಸಿ ಸಂವಿಧಾನವನ್ನು ಉಲ್ಲಂಘಿಸಿ ಕೇಂದ್ರ ಸರ್ಕಾರ ಈ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಈ ದೇಶ ಜನರಿಂದ ಸೃಷ್ಟಿಯಾಗಿದೆ ಹೊರತು ಯಾವುದೇ ನಿರ್ಧಿಷ್ಟ ಪ್ರದೇಶದಿಂದಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನ ಪ್ರದತ್ತವಾದ ಅಧಿಕಾರವನ್ನು ಉಲ್ಲಂಘಿಸಿ ದುರುಪಯೋಗ ಮಾಡಿಕೊಂಡಿರುವುದರಿಂದ ದೇಶದ ಭದ್ರತೆ ಮೇಲೆ ಅದು ಗಂಭೀರ ಪರಿಣಾಮ ಬೀರುತ್ತದೆ ಎಂದು ಅವರು ಟ್ವೀಟ್ನಲ್ಲಿ ಆತಂಕ ವ್ಯಕ್ತಪಡಿಸಿದರು.
ಅಧಿಕಾರವನ್ನು ಹೀಗೆ ದುರುಪಯೋಗಪಡಿಸಿಕೊಂಡಿರುವುದು ನಮ್ಮ ದೇಶದ ರಾಷ್ಟ್ರೀಯ ಭದ್ರತೆಯ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಉಂಟು ಮಾಡಲಿದೆ’ ಎಂದು ಅವರು ಎಚ್ಚರಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…