ಬೆಂಗಳೂರು, : ”ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ” ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು” ಎಂದು ಹೇಳಿದ್ದಾರೆ.
”ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ” ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…