ಬೆಂಗಳೂರು: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು’ ‘ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ’ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.
ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಅಭಿವೃದ್ಧಿ ಕುಂಠಿತ ಆಗದಂತೆ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ವರಮಾನ ಸಂಗ್ರಹದಲ್ಲಿ ₹30,000 ಕೋಟಿ ಕೊರತೆ ಆಗಲಿದೆ. ಆದರೂ, ಸಾಲ ಪಡೆದು ಅಭಿವೃದ್ಧಿ ಕಾರ್ಯ ಮುಂದುವರಿಸಲಾಗುವುದು ಎಂದರು.
ರಾಜ್ಯವನ್ನು ಅಭಿವೃದ್ಧಿ ವಿಚಾರದಲ್ಲಿ ಮೊದಲ ಸ್ಥಾನಕ್ಕೇರಿಸುವುದೇ ತಮ್ಮ ಗುರಿ. ಬೇರೆ ಯಾವ ವಿಚಾರಗಳಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…