Featured

ಬ್ರಿಟನ್ ರೂಪಾಂತರ ಕೊರೋನಾ :  ಭಾರತಕ್ಕೆ ಪ್ರವೇಶಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ -Vishwanews24

ಬ್ರಿಟನ್ ರೂಪಾಂತರ ಕೊರೋನಾ :  ಭಾರತಕ್ಕೆ ಪ್ರವೇಶಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ -Vishwanews24

ನವದೆಹಲಿ: ಬ್ರಿಟನ್ ನಲ್ಲಿ ಕಾಣಿಸಿಕೊಂಡಿರುವ ಕೊರೋನಾ ರೂಪಾಂತರ ಸೋಂಕು ಭಾರತಕ್ಕೆ ಪ್ರವೇಶಿಸಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ. ಪಾಲ್ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ. ಈ ರೂಪಾಂತರ ಸೋಂಕು ದೇಶವನ್ನು ಪ್ರವೇಶಿಸದಂತೆ ಸೂಕ್ತ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಜನತೆ ಆತಂಕಕ್ಕೆ ಒಳಗಾಗಬೇಕಿಲ್ಲ. ಹಾಗೆಂದ ಮಾತ್ರಕ್ಕೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಕೇಂದ್ರ ಸರ್ಕಾರ ತಿಳಿಸಿದರು.

ಈ ಪರಿವರ್ತಿತ ಸೋಂಕು ಅಪಾಯಕಾರಿಯೂ ಅಲ್ಲ. ಕೊರೋನಾ ಸೋಂಕಿನ ಹೊಸ ರೂಪಾಂತರವು ರೋಗ ಉಲ್ಬಣ ಮತ್ತು ಸಾವು-ನೋವಿಗೆ ಕಾರಣವಾಗುತ್ತಿಲ್ಲ. ಕೋವಿಡ್-೧೯ ನಿಯಂತ್ರಣಕ್ಕೆ ಈಗಾಗಲೇ ಅಭಿವೃದ್ಧಿಪಡಿಸಿರುವ ಲಸಿಕೆ ವಿತರಣೆ ಮಾಡಲಾಗುವುದು ಎಂದು ಹೇಳಿದರು.

ಈ ನಡುವೆ ಐಸಿಎಂಆರ್ ಕೂಡ ಹೇಳಿಕೆ ನೀಡಿದ್ದು, ಬ್ರಿಟನ್ನಿನಲ್ಲಿ ಪತ್ತೆಯಾಗಿರುವ ಕೊರೋನಾ ವೈರಸ್’ನ ಹೊಸ ಪ್ರಭೇದ ಭಾರತದಲ್ಲಿ ಇನ್ನೂ ಯಾರಲ್ಲೂ ಪತ್ತೆಯಾಗಿಲ್ಲ ಎಂದಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago