ಮೈಸೂರು: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಹಿನ್ನೆಲೆ, ಸಂಸದ ಪ್ರತಾಪ್ಸಿಂಹ ಗೋಶಾಲೆಯಲ್ಲಿ ಶ್ರಮದಾನ ಮಾಡಿದರು. ಗೋಪಾಲಕನಾಗಿ ಗೋಶಾಲೆಯಲ್ಲಿ ಸಗಣಿ ಬಾಚಿ ಸೇವೆ ಮಾಡಿದರು. ಗೋ ಪೂಜೆಗಾಗಿ ತಾನೇ ಹಸುವಿನ ಮೈತೊಳೆದು, ಮೇವು ತಿನ್ನಿಸಿ ಹಾರೈಕೆ ಮಾಡಿದರು.
ಮೈಸೂರಿನ ಪಿಂಜರಾಪೋಲ್ ನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಪ್ರತಾಪ್ ಸಿಂಹ, ಗೋವುಗಳನ್ನು ಸ್ವಚ್ಛಗೊಳಿಸಿ ನಂತರ ಗೋ ಪೊಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್ ತಿನ್ನುತ್ತಾರೆ ಎನ್ನಲು ಆಗುತ್ತಾ ? ., ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವದೇ ನನಗೆ ಅರ್ಥವಾಗುತ್ತಿಲ್ಲ.
ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್ನವರು ಮಾತ್ರ ಮಾತನಾಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…