4ನೇ ಬಾರಿಗೆ ಜಾರ್ಖಂಡ್ನ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ – vishwanews24
4ನೇ ಬಾರಿಗೆ ಜಾರ್ಖಂಡ್ನ ಸಿಎಂ ಆಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ
ರಾಂಚಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್ ಸೊರೆನ್ ಇಂದು (ನ.28) 4ನೇ ಬಾರಿಗೆ ಜಾರ್ಖಂಡ್ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್, 49 ವರ್ಷದ ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ನ. 30ರಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ – vishwanews24
ಮೈತ್ರಿಕೂಟದ ನಡುವೆ ಸಚಿವ ಸಂಪುಟ ಪಟ್ಟಿ ಅಂತಿಮವಾಗದೇ ಇರುವುದರಿಂದ ಇಂದು ಹೇಮಂತ್ ಸೊರೆನ್ ಏಕೈಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಜೆಎಂಎಂ (JMM) ಮುಖ್ಯಮಂತ್ರಿ ಹುದ್ದೆಯೊಂದಿಗೆ 6 ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್ (Congress) ನಾಲ್ಕು ಸ್ಥಾನಗಳು ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ದಳಕ್ಕೆ ಒಂದು ಸ್ಥಾನ ಸಿಗಲಿದೆ. ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ-ಎಂಎಲ್ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ.
ಬೆಳ್ತಂಗಡಿ : ಸ್ನಾನಕ್ಕೆ ಹೋದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರುಪಾಲು – vishwanews24
