ರಾಂಚಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್ ಸೊರೆನ್ ಇಂದು (ನ.28) 4ನೇ ಬಾರಿಗೆ ಜಾರ್ಖಂಡ್ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್, 49 ವರ್ಷದ ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಮೈತ್ರಿಕೂಟದ ನಡುವೆ ಸಚಿವ ಸಂಪುಟ ಪಟ್ಟಿ ಅಂತಿಮವಾಗದೇ ಇರುವುದರಿಂದ ಇಂದು ಹೇಮಂತ್ ಸೊರೆನ್ ಏಕೈಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಜೆಎಂಎಂ (JMM) ಮುಖ್ಯಮಂತ್ರಿ ಹುದ್ದೆಯೊಂದಿಗೆ 6 ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್ (Congress) ನಾಲ್ಕು ಸ್ಥಾನಗಳು ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ದಳಕ್ಕೆ ಒಂದು ಸ್ಥಾನ ಸಿಗಲಿದೆ. ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ-ಎಂಎಲ್ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…