ಮುಂಬೈ: ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.
ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…