ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ ಮಾಗಡಿ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.
ಬಾಲಕಿ ಕುಟುಂಬದ ಸಂಬಂಧಿಯಾದ ಇರ್ಫಾನ್ ಆಗಾಗ ಆಕೆಯ ಮನೆಗೆ ಬಂದು ಹೋಗುತ್ತಿದ್ದ. ಇದೇ ರೀತಿ ಜು.20 ರಂದು ಮನೆಗೆ ಬಂದಿದ್ದ ಆತ, ಬಾಲಕಿಗೆ ಐಸ್ ಕ್ರೀಂ ಕೊಡಿಸುವುದಾಗಿ ತನ್ನ ಸ್ಕೂಟರ್ನಲ್ಲಿ ಕರೆದೊಯ್ದಿದ್ದಾನೆ. ಸಂಜೆ 7 ಗಂಟೆಯಾದರೂ ಮಗು ಮನೆಗೆ ಬಾರದಿದ್ದರಿಂದ ಗಾಬರಿಗೊಂಡ ಪೋಷಕರು ವಿಚಾರಿಸಿದಾಗ, ಇರ್ಫಾನ್ ಖಾನ್ ಬಾಲಕಿಯನ್ನ ಕರೆದೊಯ್ಯುತ್ತಿದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದರು.
ಬಳಿಕ ಇರ್ಫಾನ್ಗೆ ಫೋನ್ ಮಾಡಿದ ಫೋಷಕರು ಮಗು ಬಗ್ಗೆ ವಿಚಾರಿಸಿದಾಗ ನನಗೇನು ಗೊತ್ತಿಲ್ಲ ಎಂದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಇದರಿಂದ ಅನುಮಾನಗೊಂಡ ಪೋಷಕರು ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಸೇರಿದಂತೆ, ವಿವಿಧ ಮೂಲಗಳನ್ನು ಆಧರಿಸಿ ಪರಿಶೀಲನೆ ನಡೆಸಿದ್ದರು. ಬಳಿಕ ಆರೋಪಿ ಬೆಂಗಳೂರು-ಮಾಗಡಿ ರಸ್ತೆಯ ತಿಪ್ಪಗೊಂಡನಹಳ್ಳಿ ಬಳಿ ಓಡಾಡಿರುವುದನ್ನ ಗಮನಿಸಿ, ಸುತ್ತಮುತ್ತ ಹುಡುಕಾಡಿದಾಗ ರಸ್ತೆ ಬದಿಯ ಪೊದೆಯಲ್ಲಿ ಬಾಲಕಿ ಶವ ಪತ್ತೆಯಾಗಿತ್ತು.
ಇದೀಗ ಕಲಾಸಿಪಾಳ್ಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಘಟನೆ ಖಂಡಿಸಿ ಮಾಗಡಿಯ ಮುಸ್ಲಿಂ ಸಮುದಾಯ ಬೃಹತ್ ಪ್ರತಿಭಟನೆ ನಡೆಸಿದೆ. ಮಹಿಳೆಯರು ಸೇರಿ ನೂರಾರು ಮಂದಿ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ, ಇಲ್ಲದಿದ್ದರೆ ಎನ್ಕೌಂಟ್ ಮಾಡಿ ಎಂದು ಪೋಷಕರು ಆಗ್ರಹಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…