Featured

400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಗುರು ಶನಿ ಮಹಾಸಂಗಮ -Vishwanews24

400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಗುರು ಶನಿ ಮಹಾಸಂಗಮ -Vishwanews24

ಬೆಂಗಳೂರು:. 400 ವರ್ಷಗಳ ನಂತರ  ಅಚ್ಚರಿ ಆಕಾಶದಲ್ಲಿ ನಡೆಯಲಿದೆ. ಖಗೋಳವಿಜ್ಞಾನದ ಅತ್ಯಂತ ಅಪರೂಪದ ವಿದ್ಯಮಾನವಿದು. ಅದೇನೆಂದರೆ, ಗುರು ಮತ್ತು ಶನಿಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿದ್ದು, ಇದನ್ನು ವಿಜ್ಞಾನಿಗಳು ‘ಮಹಾ ಸಂಯೋಗ’ ಎಂದೇ ಕರೆದಿದ್ದಾರೆ.

ಅಂದಹಾಗೆ ಗುರು ಮತ್ತು ಶನಿ ಗ್ರಹಗಳು ಡಿಸೆಂಬರ್ 13ರಿಂದಲೇ ಸಮೀಪಿಸುತ್ತಿವೆ. ಅದರ ಅಂತರ ಇಂದು ಅತ್ಯಂತ ಕಡಿಮೆಯಾಗಿದ್ದು, ಅಂಥ ಅಪೂರ್ವ ನೋಟವನ್ನು ಎಲ್ಲರೂ ಕಣ್ತುಂಬಿಸಿಕೊಳ್ಳಬಹುದಾಗಿದೆ. ಏಕೆಂದರೆ ನಾಳೆಯಿಂದ ಮತ್ತೆ ಈ ಎರಡೂ ಗ್ರಹಗಳು ದೂರ ದೂರ ಸರಿಯಲು ಆರಂಭಿಸುತ್ತವೆ.

ಶನಿ ಗ್ರಹದ ಕೆಳಗಡೆಗಳಲ್ಲಿ ಗುರುಗ್ರಹ ಕಾಣಿಸಿಕೊಳ್ಳಲಿದೆ. ನಾಳೆಯಿಂದ ಮತ್ತೆ ಪಥ ಬದಲಿಸುವ ಈ ಎರಡೂ ಗ್ರಹಗಳು ಉಲ್ಟಾ ಕಾಣಿಸಲಿವೆ. ಅಂದರೆ ಗುರುಗ್ರಹ ಮೇಲುಗಡೆ ಹಾಗೂ ಶನಿಗ್ರಹ ಕೆಳಗೆ ಆಗಲಿದೆ.

‘ಈ ಎರಡೂ ಗ್ರಹಗಳು ತಮ್ಮ ಕಕ್ಷೆಯಲ್ಲಿ ಸೂರ್ಯನನ್ನು ಸುತ್ತುತ್ತಿರುತ್ತವೆ. ಆದ್ದರಿಂದ ಎರಡೂ ಗ್ರಹಗಳು ಇದೀಗ ಪರಸ್ಪರ ಹಾದುಹೋಗಲಿವೆ. ಈ ಎರಡೂ ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಗುರು ಮತ್ತು ಶನಿ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿರುವ ಕಾರಣ, ಇಂಥದ್ದೊಂದು ವಿದ್ಯಮಾನ ನಡೆಯಲಿದೆ ಎಂದಿರುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ನಾಸಾ’ದ ವಿಜ್ಞಾನಿಗಳು, ಇಂದು ನೀವು ಇದನ್ನು ನೋಡಲು ಮಿಸ್​ ಮಾಡಿಕೊಂಡರೆ ಮತ್ತೆ ನೀವು 60 ವರ್ಷ ಕಾಯಬೇಕು ಎಂದಿದ್ದಾರೆ.

ಭೂಮಿಯಿಂದ ಸೂರ್ಯನಿಗಿರುವ ದೂರದ 5ರಷ್ಟು ದೂರದಲ್ಲಿ ಗುರುಗ್ರಹ ವಿದ್ದು ಇದು ಸೂರ್ಯನ ಸುತ್ತ ಪರಿಭ್ರಮಿಸಲು 11.86 ವರ್ಷಗಳು ಬೇಕು. ಹಾಗೆಯೇ ಶನಿಯು, ಭೂಮಿ ಹಾಗು ಸೂರ್ಯನ ಅಂತರದ ಎರಡರಷ್ಟು ಅಂತರವಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ತೆಗುದುಕೊಳ್ಳುತ್ತದೆ. ಈ ಎರಡು ಗ್ರಹಗಳು ಸಮೀಪಿಸಲು ಕನಿಷ್ಠ 20 ವರ್ಷಗಳು ಬೇಕು. ಆದ್ದರಿಂದ ಈ ಗ್ರಹಗಳ ಯುತಿಯನ್ನು ಸಮಾಗಮ ಎಂದು ಕರೆಯಲಾಗುತ್ತದೆ.

ಈ ಜೋಡಿ ಕೇವಲ 1 ಗಂಟೆ 45 ನಿಮಿಷಗಳಷ್ಟು ಮಾತ್ರ ಕಾಣಸಿಗುತ್ತದೆ. ಎರಡು ಗ್ರಹಗಳು ಸೂರ್ಯಾಸ್ತದ ನಂತರ 6.15 ರಿಂದ ರಾತ್ರಿ 8 ಗಂಟೆಯ ವರೆಗೆ ಕಂಡು, ನಂತರ ನೈರುತ್ಯದಲ್ಲಿ 8 ಗಂಟೆಗೆ ಅಸ್ತವಾಗುತ್ತದೆ. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಡಿ.21ರಂದು ಸಂಜೆ 6ಗಂಟೆಗೆ ಈ ಗ್ರಹಗಳ ವೀಕ್ಷಣೆಯನ್ನು ಆಯೋಜಿಸಲಾಗಿದೆ ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

12 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

12 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

12 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

12 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

13 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

13 hours ago