Featured

400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಗುರು ಶನಿ ಮಹಾಸಂಗಮ -Vishwanews24

400 ವರ್ಷಗಳ ಬಳಿಕ ಆಗಸದಲ್ಲಿ ಇಂದು ಗುರು ಶನಿ ಮಹಾಸಂಗಮ -Vishwanews24

ಬೆಂಗಳೂರು:. 400 ವರ್ಷಗಳ ನಂತರ  ಅಚ್ಚರಿ ಆಕಾಶದಲ್ಲಿ ನಡೆಯಲಿದೆ. ಖಗೋಳವಿಜ್ಞಾನದ ಅತ್ಯಂತ ಅಪರೂಪದ ವಿದ್ಯಮಾನವಿದು. ಅದೇನೆಂದರೆ, ಗುರು ಮತ್ತು ಶನಿಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿದ್ದು, ಇದನ್ನು ವಿಜ್ಞಾನಿಗಳು ‘ಮಹಾ ಸಂಯೋಗ’ ಎಂದೇ ಕರೆದಿದ್ದಾರೆ.

ಅಂದಹಾಗೆ ಗುರು ಮತ್ತು ಶನಿ ಗ್ರಹಗಳು ಡಿಸೆಂಬರ್ 13ರಿಂದಲೇ ಸಮೀಪಿಸುತ್ತಿವೆ. ಅದರ ಅಂತರ ಇಂದು ಅತ್ಯಂತ ಕಡಿಮೆಯಾಗಿದ್ದು, ಅಂಥ ಅಪೂರ್ವ ನೋಟವನ್ನು ಎಲ್ಲರೂ ಕಣ್ತುಂಬಿಸಿಕೊಳ್ಳಬಹುದಾಗಿದೆ. ಏಕೆಂದರೆ ನಾಳೆಯಿಂದ ಮತ್ತೆ ಈ ಎರಡೂ ಗ್ರಹಗಳು ದೂರ ದೂರ ಸರಿಯಲು ಆರಂಭಿಸುತ್ತವೆ.

ಶನಿ ಗ್ರಹದ ಕೆಳಗಡೆಗಳಲ್ಲಿ ಗುರುಗ್ರಹ ಕಾಣಿಸಿಕೊಳ್ಳಲಿದೆ. ನಾಳೆಯಿಂದ ಮತ್ತೆ ಪಥ ಬದಲಿಸುವ ಈ ಎರಡೂ ಗ್ರಹಗಳು ಉಲ್ಟಾ ಕಾಣಿಸಲಿವೆ. ಅಂದರೆ ಗುರುಗ್ರಹ ಮೇಲುಗಡೆ ಹಾಗೂ ಶನಿಗ್ರಹ ಕೆಳಗೆ ಆಗಲಿದೆ.

‘ಈ ಎರಡೂ ಗ್ರಹಗಳು ತಮ್ಮ ಕಕ್ಷೆಯಲ್ಲಿ ಸೂರ್ಯನನ್ನು ಸುತ್ತುತ್ತಿರುತ್ತವೆ. ಆದ್ದರಿಂದ ಎರಡೂ ಗ್ರಹಗಳು ಇದೀಗ ಪರಸ್ಪರ ಹಾದುಹೋಗಲಿವೆ. ಈ ಎರಡೂ ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಗುರು ಮತ್ತು ಶನಿ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿರುವ ಕಾರಣ, ಇಂಥದ್ದೊಂದು ವಿದ್ಯಮಾನ ನಡೆಯಲಿದೆ ಎಂದಿರುವ ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ‘ನಾಸಾ’ದ ವಿಜ್ಞಾನಿಗಳು, ಇಂದು ನೀವು ಇದನ್ನು ನೋಡಲು ಮಿಸ್​ ಮಾಡಿಕೊಂಡರೆ ಮತ್ತೆ ನೀವು 60 ವರ್ಷ ಕಾಯಬೇಕು ಎಂದಿದ್ದಾರೆ.

ಭೂಮಿಯಿಂದ ಸೂರ್ಯನಿಗಿರುವ ದೂರದ 5ರಷ್ಟು ದೂರದಲ್ಲಿ ಗುರುಗ್ರಹ ವಿದ್ದು ಇದು ಸೂರ್ಯನ ಸುತ್ತ ಪರಿಭ್ರಮಿಸಲು 11.86 ವರ್ಷಗಳು ಬೇಕು. ಹಾಗೆಯೇ ಶನಿಯು, ಭೂಮಿ ಹಾಗು ಸೂರ್ಯನ ಅಂತರದ ಎರಡರಷ್ಟು ಅಂತರವಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ತೆಗುದುಕೊಳ್ಳುತ್ತದೆ. ಈ ಎರಡು ಗ್ರಹಗಳು ಸಮೀಪಿಸಲು ಕನಿಷ್ಠ 20 ವರ್ಷಗಳು ಬೇಕು. ಆದ್ದರಿಂದ ಈ ಗ್ರಹಗಳ ಯುತಿಯನ್ನು ಸಮಾಗಮ ಎಂದು ಕರೆಯಲಾಗುತ್ತದೆ.

ಈ ಜೋಡಿ ಕೇವಲ 1 ಗಂಟೆ 45 ನಿಮಿಷಗಳಷ್ಟು ಮಾತ್ರ ಕಾಣಸಿಗುತ್ತದೆ. ಎರಡು ಗ್ರಹಗಳು ಸೂರ್ಯಾಸ್ತದ ನಂತರ 6.15 ರಿಂದ ರಾತ್ರಿ 8 ಗಂಟೆಯ ವರೆಗೆ ಕಂಡು, ನಂತರ ನೈರುತ್ಯದಲ್ಲಿ 8 ಗಂಟೆಗೆ ಅಸ್ತವಾಗುತ್ತದೆ. ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಡಿ.21ರಂದು ಸಂಜೆ 6ಗಂಟೆಗೆ ಈ ಗ್ರಹಗಳ ವೀಕ್ಷಣೆಯನ್ನು ಆಯೋಜಿಸಲಾಗಿದೆ ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago