ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಧ್ವಜಾರೋಹಣ ಸಂಪನ್ನ, ಫೆಬ್ರವರಿ 18 ರಂದು ಮನ್ಮಹಾರಥೋತ್ಸವ.
ಕಾಪು: ಕಾಪು ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಫೆ.12ರಿಂದ 20 ರವರೆಗೆ ನಡೆಯಲಿರುವ ವಾರ್ಷಿಕ ಮಹೋತ್ಸವದ ಪ್ರಯುಕ್ತ ಶುಕ್ರವಾರ ಧ್ವಜಾರೋಹಣ ಸಂಪನ್ನಗೊಂಡಿತು.
ದೇವಳದ ತಂತ್ರಿಗಳಾದ ವೇದಮೂರ್ತಿ ಶ್ರೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಅನುಷ್ಠಾನಗಳೊಂದಿಗೆ ಬೆಳಗ್ಗೆ 8.35 ಕ್ಕೆ ಧ್ವಜಾರೋಹಣ ನೆರವೇರಿಸಲಾಯಿತು.
ಫೆ 18 ರಂದು ಶ್ರೀ ಮನ್ಮಹಾರಥೋತ್ಸವ:
ಕ್ಷೇತ್ರದ ವರ್ಷಾವಧಿ ಮಹೋತ್ಸವದ ಪ್ರಯುಕ್ತ ಫೆ.18ರಂದು ಶ್ರೀ ಮನ್ಮಹಾರಥೋತ್ಸವ ಸಂಪನ್ನಗೊಳ್ಳಲಿದೆ.
ನಾನಾ ಧಾರ್ಮಿಕ ಅನುಷ್ಠಾನಗಳೊಂದಿಗೆ ಆ ದಿನ ಬೆಳಗ್ಗೆ ರಥಾವರೋಹಣ ನಡೆಯಲಿದ್ದು, ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ 8 ಗಂಟೆಗೆ ಶ್ರೀ ಮನ್ಮಹಾರಥೋತ್ಸವ ಬಳಿಕ, ಉತ್ಸವ ಬಲಿ, ಕಟ್ಟೆ ಪೂಜೆ, ಭೂತ ಬಲಿ, ಶಯನ ಸಹಿತ ಧಾರ್ಮಿಕ ಅನುಷ್ಠಾನಗಳೊಂದಿಗೆ ವರ್ಷಾವಧಿ ಉತ್ಸವ ಸಂಪನ್ನಗೊಳ್ಳಲಿದೆ.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ಎಂ ಬಂಗೇರ, ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ , ಪ್ರಮುಖರಾದ ಕೆ.ಪಿ.ಆಚಾರ್ಯ, ಕೆ.ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ್ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಯೋಗೀಶ್ ವಿ. ಶೆಟ್ಟಿ, ದಿವಾಕರ ಶೆಟ್ಟಿ ಕಾಪು, , ರತ್ನಾಕರ ಹೆಗ್ಡೆ ಕಲಿಲಬೀಡು,ವಿಕ್ರಮ್ ಕಾಪು ಶ್ರೀಧರ ಶೆಣೈ, , ಲಕ್ಷ್ಮೀಕಾಂತ್ ಕೆ. ಆಡಳಿತ ಮಂಡಳಿಯ ಸದಸ್ಯರಾದ ನಾರಾಯಣ ತಂತ್ರಿ, ಸರೋಜಿನಿ ಜೆ ಶೆಟ್ಟಿ,ದೇವರಾಜ್ ಪಡು,ಉಮೇಶ್ ಪೂಜಾರಿ, ರಮಾ ವೈ,ಎಮ್ ಕುಟ್ಟಿ,ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…