Featured

ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ : ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24

ಉಡುಪಿ :ಗ್ರಾಮೀಣ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹ-ಸಚಿವ ಡಾ. ಕೆ ಸಿ ನಾರಾಯಣಗೌಡ -Vishwanews24

ಉಡುಪಿ : ರಾಜ್ಯದಲ್ಲಿ ೨ ಕೋಟಿಗೂ ಅಧಿಕ ಯುವಕರಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ಯುವಪ್ರತಿಭೆಗಳ ಕಲೆಯನ್ನು ಗುರುತಿಸಿ , ಅವರ ಪ್ರತಿಭೆಯನ್ನು ದೇಶ-ವಿದೇಶಗಳಲ್ಲಿಯೂ ಮೆರಗು ಮೂಡಿಸುವಂತೆ ಮಾಡುವ ನಿಟ್ಟಿನಲ್ಲಿ , ರಾಜ್ಯದಲ್ಲಿ ಯುವಕರನ್ನು ಪ್ರೋತ್ಸಾಹಿಸುವಂತಹ ಯೋಜನೆಗಳನ್ನು ತರಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣ ಗೌಡ ಹೇಳಿದರು.

ಅವರು ಶುಕ್ರವಾರ ಮಟ್ಟಾರುವಿನಲ್ಲಿ , ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ೩.೨೯ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾದನೆ ತೋರುವ ಯುವಕರಿಗೆ ಅಗತ್ಯ ತರಬೇತಿ, ಉದ್ಯೋಗ ನೀಡಲು ಕ್ರಮ ಕೈಗೊಳ್ಳಲಾಗುವುದು, ಯುವಕರ ಹೊಸ ಪ್ರತಿಭೆಯನ್ನು ಅನಾವರಣಗೋಳಿಸಲು ಸುಸಜ್ಜಿತ ವೇದಿಕೆ ಕಲ್ಪಿಸಲಾಗುವುದು, ಕರಾವಳಿ ಭಾಗದ ಜನತೆಯು ಕಲೆ, ಶಿಕ್ಷಣ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದಿದ್ದಾರೆ ಎಂದು ಸಚಿವರು ಹೇಳಿದರು. ಕೋವಿಡ್ ಎರಡನೇ ಅಲೆ ಕೇರಳ ಮತ್ತು ಮಹಾರಾಷ್ಟçದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅದರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು.ಸಭೆ, ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಸಚಿವ ಡಾ.ಕೆ.ಸಿ. ನಾರಾಯಣಗೌಡ ಹೇಳಿದರು.

ಉಡುಪಿ : ಶಾಸಕರ ಪ್ರದೇಶಾಭಿವೃಧ್ದಿ ಅನುದಾನ ಸಂಪೂರ್ಣವಾಗಿ ಬಳಸಿ: ಸಚಿವ ಡಾ.ಕೆ.ಸಿ. ನಾರಾಯಣಗೌಡ -Vishwanews24

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳಿಗೆ ಅಗತ್ಯವಿರುವ ಅನುದಾನವನ್ನು ಆದಷ್ಟು ಶೀಘ್ರದಲ್ಲಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಆ ಮೂಲಕ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಲಭ್ಯಗಳ ಪ್ರಯೋಜನ ಒದಗಿಸಲಾಗುವುದು ಹಾಗೂ ಸ್ಥಳೀಯ ಜನರ ಸಮಸ್ಯೆಗಳಿಗೆ ಅನುಗುಣವಾಗಿ ಯೋಜನೆಗಳನ್ನು ಗುರುತಿಸಿ , ಪ್ರಾಥಮಿಕ ಸರ್ವೇ, ವರದಿ ಮತ್ತು ಸಮಗ್ರ ಯೋಜನಾ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದರು.

ಕಾರ್ಯಕ್ರಮದ ಮುಖ್ಯಅಥಿತಿಯಾಗಿ ಮಾತನಾಡಿದ ಕರಾವಳಿ ಪ್ರಾಧಿಕಾರದಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ , ಪ್ರಾಧಿಕಾರದ ವತಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಇದುವರೆಎ ೪ ತೂಗು ಸೇತುವೆ, ೧೧೭ ಕಾಲುಸಂಕ/ಕಿರು ಸೇತುವೆ, ೩೫ ಸುಸಜ್ಜಿತ ಮೀನು ಮಾರುಕಟ್ಟೆ , ೮ ಉದ್ಯಾನವನ, ೯೦ ರಸ್ತೆ ಸೇರಿದಂತೆ ಹಲವು ಕಾಮಗಾರಿಗಳನ್ನು ಮುಕ್ತಾಯಗೊಳಿಸಿದ್ದು, ಪ್ರಸಕ್ತ ಬಜೆಟ್ ನಲ್ಲಿ ಪ್ರಾಧಿಕಾರಕ್ಕೆ ೧೦೦ ಕೋಟಿ ರೂ ಗಳ ಅನುದಾನವನ್ನು ಕೋರಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ತಾ.ಪಂ ಸದಸ್ಯೆ ಗೀತಾ ವಾಗ್ಲೆ, ಶಿರ್ವ ಗ್ರಾಂ.ಪA. ಅಧ್ಯಕ್ಷೆ ಗ್ರೆಗೋರಿ ಕೊನ್ರಾಡ್ ಕಸ್ತಲಿನೋ, ಜಿ.ಪಂ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಸುವರ್ಣ, ಯೋಜನಾ ಇಲಾಖೆ ನಿರ್ದೇಶಕ ಚಂದ್ರಶೇಖರ್, ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಸ್ಥಳೀಯ ವಿವಿಧ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.ಕರಾವಳಿ ಪ್ರಾಧಿಕಾರ ಕಾರ್ಯದರ್ಶಿ ಪ್ರದೀಪ್ ಡಿಸೋಜ ಸ್ವಾಗತಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago