ಮಂಗಳೂರು: ಮೊಗವೀರ ಸಮುದಾಯವನ್ನು ಪರಿಶಿಷ್ಟ ವರ್ಗ (ಎಸ್ಟಿ)ಕ್ಕೆ ಸೇರ್ಪಡೆಗೊಳಿಸಬೇಕೆಂದು ನಗರದ ಬೋಳೂರಿನ ‘ಫ್ರೆಂಡ್ಸ್ ಮೊಗವೀರ’ ಸಂಘಟನೆಯ ಸದಸ್ಯರು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ತಮ್ಮ ಮಾರ್ಗದರ್ಶಕ, ಮೊಗವೀರ ಸಮಾಜದ ಮುಂದಾಳು ಹಾಗೂ ಉದ್ಯಮಿ ಜಗದೀಶ್ ಬೋಳೂರು ಅವರ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಅರ್ಪಿಸಿದರು.
ಕರ್ನಾಟಕ ರಾಜ್ಯದಲ್ಲಿ ಮೊಗವೀರ ಜನಾಂಗದ ಮಂದಿ ಸುಮಾರು 65 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದಾರೆ. ಸಂವಿಧಾನದಲ್ಲಿ ಸಮುದ್ರ- ನದಿ, ಜಲಾಶಯ ಮತ್ತು ಕೆರೆಗಳ ಸನಿಹ ವಾಸಿಸುವ ಜನರಿಗೆ ಪರಿಶಿಷ್ಟ ವರ್ಗಕ್ಕೆ ಸೇರಿಸುವ ಸಂದರ್ಭ ಆದ್ಯತೆ ನೀಡಬೇಕೆಂಬ ಕುರಿತು ಉಲ್ಲೇಖಿಸಲಾಗಿದೆ ಎಂದು ಈ ಸಂದರ್ಭ ಸಂಸದರಿಗೆ ಮಾಹಿತಿ ಹಾಗೂ ಸಮಾಜದ ಸ್ಥಿತಿಗತಿ, ವೃತ್ತಿ ಬಗ್ಗೆ ತಿಳಿಸಲಾಯಿತು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಮಿಳು ಸಂಸ್ಕೃತಿಯನ್ನು ಗೌರವಿಸುವುದಿಲ್ಲ : ರಾಹುಲ್ ಗಾಂಧಿ -Vishwanews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…