Featured

44ನೇ ವಯಸ್ಸಿನಲ್ಲಿ ಎಸೆಸೆಲ್ಸಿ ಪಾಸಾದ ಮಂಗಳೂರು ವಿವಿ ಕಾಲೇಜು ಅಟೆಂಡರ್ ಜಯಶ್ರೀ -Vishwanews24

ಸಾಧನೆಗೆ ಅಡ್ಡಿಯಾಗದ ವಯಸ್ಸು..

44ನೇ ವಯಸ್ಸಿನಲ್ಲಿ ಎಸೆಸೆಲ್ಸಿ ಪಾಸಾದ ಮಂಗಳೂರು ವಿವಿ ಕಾಲೇಜು ಅಟೆಂಡರ್ ಜಯಶ್ರೀ..

ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್..

ಮಂಗಳೂರು : ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾರೆ.

ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ.

ಈ ನಡುವಿನ ಜೀವನದ ಬಂಡಿ ಕಡುಕಷ್ಟದಲ್ಲಿ ಸವೆದರೂ ಮತ್ತೆ ಮಕ್ಕಳಂತೆ ಪಾಠ ಕಲಿತವರು, ಇದೀಗ 625ಕ್ಕೆ 247 ಅಂಕಗೊಂದಿಗೆ ಪಾಸಾದ ಖುಷಿಯನ್ನೂ ಮಕ್ಕಳಂತೆಯೇ ಸಂಭ್ರಮಿಸಿದ್ದಾರೆ. ಅವರ ಜೀವನೋತ್ಸಾಹ ಎಂಥವರಿಗೂ ಸ್ಫೂರ್ತಿಯಂತಿದೆ.

ಮಂಗಳೂರಿನ ವೆಲೆನ್ಶಿಯಾ ಸೂಟರ್‌ಪೇಟೆಯಲ್ಲಿ ಜಯಶ್ರೀ ಮನೆ. ಪತಿ ಆಟೋ ಡ್ರೈವರ್ ಆಗಿದ್ದವರು ಈಗ ವಾಚ್‌ಮ್ಯಾನ್ ಕೆಲಸ ಮಾಡಿಕೊಂಡಿದ್ದಾರೆ. ಜೀವನ ಸಾಗಿಸಲು ಅನೇಕ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದವರಿಗೆ ನಗರದ ವಿವಿ ಕಾಲೇಜಿನಲ್ಲಿ ಕ್ಲೀನಿಂಗ್ ಕೆಲಸ ಸಿಕ್ಕಿತ್ತು. ಕ್ರಮೇಣ ಅಟೆಂಡರ್ ಸ್ಥಾನಕ್ಕೇರಿದರು. ಆದರೆ ನೌಕರಿ ಈಗಲೂ ತಾತ್ಕಾಲಿಕ ನೆಲೆಯಲ್ಲೇ ಮುಂದುವರಿದಿದೆ. ಈ ನಡುವೆ ಹೇಗಾದರೂ ಮಾಡಿ ಎಸ್‌ಎಸ್‌ಎಲ್‌ಸಿ ಪಾಸಾಗಲೇಬೇಕು ಎಂಬ ಹಠಕ್ಕೆ ಬಿದ್ದ ಜಯಶ್ರೀ ಈಗ ಅದನ್ನು ಸಾಕಾರಗೊಳಿಸಿದ್ದಾರೆ.

ಮಂಗಳೂರು ವಿವಿ ಕಾಲೇಜಿನ ಪ್ರೊ. ಉದಯ ಕುಮಾರ್ ಅವರು ನನಗೆ ಕಾಲೇಜಿನಲ್ಲಿ ಕೆಲಸ ಕೊಡಿಸಿದರು. ಅದೇ ನನಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಯಿತು. ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಕಾಲೇಜಿನ ಡಾ.ಶೋಭಾ ಸ್ಫೂರ್ತಿ ನೀಡಿದ್ದಲ್ಲದೆ, ಮಾತಾ ಎಜ್ಯುಕೇಶನ್‌ಗೆ ಸೇರಿಸಿ ಫೀಸನ್ನೂ ಅವರೇ ಕಟ್ಟಿದ್ದರು ಎನ್ನುತ್ತಾರೆ ಜಯಶ್ರೀ.

ಎಸ್‌ಎಸ್‌ಎಲ್‌ಸಿ ಕಲಿಯುತ್ತಿದ್ದೇನೆ ಎಂದು ಯಾರೂ ಕೊಂಕು ಮಾತನಾಡಿಲ್ಲ. ಕುಟುಂಬದವರಾದಿಯಾಗಿ ಎಲ್ಲರೂ ಪ್ರೋತ್ಸಾಹಿಸಿದರು. ಈಗ ಪಾಸಾದ ಖುಷಿಯಲ್ಲಿ ಎಲ್ಲರೂ ಕರೆ ಮಾಡಿ ಶುಭಾಶಯ ತಿಳಿಸುತ್ತಿದ್ದಾಾರೆ. ತುಂಬ ಖುಷಿಯಾಗುತ್ತಿದೆ ಎಂದು ಜಯಶ್ರೀ ಹರ್ಷಪಟ್ಟರು.

ಈಗ ಇರುವುದು ತಾತ್ಕಾಾಲಿಕ ಕೆಲಸ. ಅದು ಕಾಯಂ ಆಗಬೇಕಾದರೆ ಎಸ್‌ಎಸ್‌ಎಲ್‌ಸಿ ಅಗತ್ಯವಿತ್ತು. ಅದಲ್ಲದಿದ್ದರೂ ನನಗೆ ಎಸೆಸೆಲ್ಸಿ ಮಾಡಲೇಬೇಕು ಎನ್ನುವ ಆಸೆಯೂ ಇತ್ತು. ಕೊನೆಗೂ 44ನೇ ವಯಸ್ಸಿನಲ್ಲಿ ಅದು ಸಾಕಾರವಾಗಿದೆ. ಇದಕ್ಕೆ ಕಾರಣಕರ್ತರಾದ, ಪ್ರೋತ್ಸಾಹ ನೀಡಿದ ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು.

ಜಯಶ್ರೀ ಪಡೆದ ವಿಷಯವಾರು ಅಂಕ

ಅಂದ ಹಾಗೆ ಜಯಶ್ರೀ ಪಡೆದುಕೊಂಡಿರುವ ಅಂಕಗಳನ್ನ ನೋಡುವುದಾದ್ರೆ, ಕನ್ನಡದಲ್ಲಿ 60 ಇಂಗ್ಲೀಷ್‌ನಲ್ಲಿ 40. ಹಿಂದಿ, ಗಣಿತದಲ್ಲಿ 35, ವಿಜ್ಞಾನದಲ್ಲಿ 35, ಸಮಾಜ ವಿಜ್ಞಾನದಲ್ಲಿ 35 ಅಂಕ ಪಡೆದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago