Featured

44ನೇ ವಯಸ್ಸಿನಲ್ಲಿ ಎಸೆಸೆಲ್ಸಿ ಪಾಸಾದ ಮಂಗಳೂರು ವಿವಿ ಕಾಲೇಜು ಅಟೆಂಡರ್ ಜಯಶ್ರೀ -Vishwanews24

ಸಾಧನೆಗೆ ಅಡ್ಡಿಯಾಗದ ವಯಸ್ಸು..

44ನೇ ವಯಸ್ಸಿನಲ್ಲಿ ಎಸೆಸೆಲ್ಸಿ ಪಾಸಾದ ಮಂಗಳೂರು ವಿವಿ ಕಾಲೇಜು ಅಟೆಂಡರ್ ಜಯಶ್ರೀ..

ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್..

ಮಂಗಳೂರು : ಕೇವಲ 5ನೇ ತರಗತಿ ಕಲಿತ್ತಿದ್ದ 44 ವರ್ಷದ ಮಹಿಳೆ ಇದೀಗ ಎಸ್‌ಎಸ್‌ಎಲ್‌ಸಿ ತೇಗರ್ಡೆಯಾಗಿದ್ದಾರೆ.

ಕೇವಲ ಐದನೇ ತರಗತಿ ವಿದ್ಯಾರ್ಹತೆ ಪಡೆದು ಮಂಗಳೂರು ವಿವಿ ಕಾಲೇಜಿನ ತಾತ್ಕಾಲಿಕ ಅಟೆಂಡರ್ ಆಗಿರುವ ಜಯಶ್ರೀ, ಇದೀಗ ಮೊದಲ ಪ್ರಯತ್ನದಲ್ಲೇ ಎಸ್‌ಎಸ್‌ಎಲ್‌ಸಿ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಲ್ಲದೇ 35 ವರ್ಷಗಳ ಬಳಿಕ ಮತ್ತೆ ವಿದ್ಯಾರ್ಥಿನಿಯಾಗಿ ಗೆದ್ದಿದ್ದಾರೆ.

ಈ ನಡುವಿನ ಜೀವನದ ಬಂಡಿ ಕಡುಕಷ್ಟದಲ್ಲಿ ಸವೆದರೂ ಮತ್ತೆ ಮಕ್ಕಳಂತೆ ಪಾಠ ಕಲಿತವರು, ಇದೀಗ 625ಕ್ಕೆ 247 ಅಂಕಗೊಂದಿಗೆ ಪಾಸಾದ ಖುಷಿಯನ್ನೂ ಮಕ್ಕಳಂತೆಯೇ ಸಂಭ್ರಮಿಸಿದ್ದಾರೆ. ಅವರ ಜೀವನೋತ್ಸಾಹ ಎಂಥವರಿಗೂ ಸ್ಫೂರ್ತಿಯಂತಿದೆ.

ಮಂಗಳೂರಿನ ವೆಲೆನ್ಶಿಯಾ ಸೂಟರ್‌ಪೇಟೆಯಲ್ಲಿ ಜಯಶ್ರೀ ಮನೆ. ಪತಿ ಆಟೋ ಡ್ರೈವರ್ ಆಗಿದ್ದವರು ಈಗ ವಾಚ್‌ಮ್ಯಾನ್ ಕೆಲಸ ಮಾಡಿಕೊಂಡಿದ್ದಾರೆ. ಜೀವನ ಸಾಗಿಸಲು ಅನೇಕ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದವರಿಗೆ ನಗರದ ವಿವಿ ಕಾಲೇಜಿನಲ್ಲಿ ಕ್ಲೀನಿಂಗ್ ಕೆಲಸ ಸಿಕ್ಕಿತ್ತು. ಕ್ರಮೇಣ ಅಟೆಂಡರ್ ಸ್ಥಾನಕ್ಕೇರಿದರು. ಆದರೆ ನೌಕರಿ ಈಗಲೂ ತಾತ್ಕಾಲಿಕ ನೆಲೆಯಲ್ಲೇ ಮುಂದುವರಿದಿದೆ. ಈ ನಡುವೆ ಹೇಗಾದರೂ ಮಾಡಿ ಎಸ್‌ಎಸ್‌ಎಲ್‌ಸಿ ಪಾಸಾಗಲೇಬೇಕು ಎಂಬ ಹಠಕ್ಕೆ ಬಿದ್ದ ಜಯಶ್ರೀ ಈಗ ಅದನ್ನು ಸಾಕಾರಗೊಳಿಸಿದ್ದಾರೆ.

ಮಂಗಳೂರು ವಿವಿ ಕಾಲೇಜಿನ ಪ್ರೊ. ಉದಯ ಕುಮಾರ್ ಅವರು ನನಗೆ ಕಾಲೇಜಿನಲ್ಲಿ ಕೆಲಸ ಕೊಡಿಸಿದರು. ಅದೇ ನನಗೆ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಯಿತು. ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಕಾಲೇಜಿನ ಡಾ.ಶೋಭಾ ಸ್ಫೂರ್ತಿ ನೀಡಿದ್ದಲ್ಲದೆ, ಮಾತಾ ಎಜ್ಯುಕೇಶನ್‌ಗೆ ಸೇರಿಸಿ ಫೀಸನ್ನೂ ಅವರೇ ಕಟ್ಟಿದ್ದರು ಎನ್ನುತ್ತಾರೆ ಜಯಶ್ರೀ.

ಎಸ್‌ಎಸ್‌ಎಲ್‌ಸಿ ಕಲಿಯುತ್ತಿದ್ದೇನೆ ಎಂದು ಯಾರೂ ಕೊಂಕು ಮಾತನಾಡಿಲ್ಲ. ಕುಟುಂಬದವರಾದಿಯಾಗಿ ಎಲ್ಲರೂ ಪ್ರೋತ್ಸಾಹಿಸಿದರು. ಈಗ ಪಾಸಾದ ಖುಷಿಯಲ್ಲಿ ಎಲ್ಲರೂ ಕರೆ ಮಾಡಿ ಶುಭಾಶಯ ತಿಳಿಸುತ್ತಿದ್ದಾಾರೆ. ತುಂಬ ಖುಷಿಯಾಗುತ್ತಿದೆ ಎಂದು ಜಯಶ್ರೀ ಹರ್ಷಪಟ್ಟರು.

ಈಗ ಇರುವುದು ತಾತ್ಕಾಾಲಿಕ ಕೆಲಸ. ಅದು ಕಾಯಂ ಆಗಬೇಕಾದರೆ ಎಸ್‌ಎಸ್‌ಎಲ್‌ಸಿ ಅಗತ್ಯವಿತ್ತು. ಅದಲ್ಲದಿದ್ದರೂ ನನಗೆ ಎಸೆಸೆಲ್ಸಿ ಮಾಡಲೇಬೇಕು ಎನ್ನುವ ಆಸೆಯೂ ಇತ್ತು. ಕೊನೆಗೂ 44ನೇ ವಯಸ್ಸಿನಲ್ಲಿ ಅದು ಸಾಕಾರವಾಗಿದೆ. ಇದಕ್ಕೆ ಕಾರಣಕರ್ತರಾದ, ಪ್ರೋತ್ಸಾಹ ನೀಡಿದ ಎಲ್ಲರಿಗೂ ಆಭಾರಿಯಾಗಿದ್ದೇನೆ ಎಂದರು.

ಜಯಶ್ರೀ ಪಡೆದ ವಿಷಯವಾರು ಅಂಕ

ಅಂದ ಹಾಗೆ ಜಯಶ್ರೀ ಪಡೆದುಕೊಂಡಿರುವ ಅಂಕಗಳನ್ನ ನೋಡುವುದಾದ್ರೆ, ಕನ್ನಡದಲ್ಲಿ 60 ಇಂಗ್ಲೀಷ್‌ನಲ್ಲಿ 40. ಹಿಂದಿ, ಗಣಿತದಲ್ಲಿ 35, ವಿಜ್ಞಾನದಲ್ಲಿ 35, ಸಮಾಜ ವಿಜ್ಞಾನದಲ್ಲಿ 35 ಅಂಕ ಪಡೆದಿದ್ದಾರೆ.

Vishwa News 24

Recent Posts

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

15 minutes ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

38 minutes ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

49 minutes ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

54 minutes ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

1 hour ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

2 hours ago