Featured

ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಹಾಗೂ ಕೌನ್ಸಿಲ್ ಮುತುವರ್ಜಿಯಲ್ಲಿ ಕೊರೋನಾ ಲಸಿಕಾ ಕ್ಯಾಂಪ್.vishwanews24

ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಹಾಗೂ ಕೌನ್ಸಿಲ್ ಮುತುವರ್ಜಿಯಲ್ಲಿ ಕೊರೋನಾ ಲಸಿಕಾ ಕ್ಯಾಂಪ್.

ಕಾಪು : ಕಾಪು ಪುರಸಭಾ ಅಧ್ಯಕ್ಷ ಅನಿಲ್ ಕುಮಾರ್ ಹಾಗೂ ಕೌನ್ಸಿಲ್ ಸದಸ್ಯರು,ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಜಂಟಿ ಆಯೋಜನೆಯಲ್ಲಿ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಕಾಪುವಿನ ಶ್ರೀ ಹಳೇ ಮಾರಿಯಮ್ಮ ಸಭಾಗೃಹದಲ್ಲಿ ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮ ವನ್ನು ಉದ್ಘಾಟಿಸಿ ಕಾಪು ಪುರಸಭಾ ಅಧ್ಯಕ್ಷರಾದ ಅನಿಲ್ ಕುಮಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಕಮಿಟಿ ಸಾರ್ವಜನಿಕರ ಸೇವೆಗಾಗಿ ದೇಗುಲ ಸಭಾಗೃಹವನ್ನು ಉಚಿತವಾಗಿ ನೀಡಿರುವ ಬಗ್ಗೆ ಕೃತಜ್ಞತೆ ಇದೆ ಮತ್ತು ಹಂತ ಹಂತವಾಗಿ ಪುರಸಭಾ ವ್ಯಾಪ್ತಿಯ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕಾರ್ಯಕ್ರಮ ವಾರ್ಡ್ ಮಟ್ಟದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.

ಈ ಹಿಂದೆ ಕಾಪುವಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆಯನ್ನು ನೀಡುತ್ತಿದ್ದು, ಜನಸಂದಣಿ ಜಾಸ್ತಿಯಾಗುತ್ತಿರುವ ಮತ್ತು ಸಾಮಾಜಿಕ ಅಂತರಕ್ಕೆ ಸಮಸ್ಯೆಯಾಗುವ ಕಾರಣ ಲಸಿಕಾ ಕೇಂದ್ರವನ್ನು ಶ್ರೀ ಹಳೇ ಮಾರಿಯಮ್ಮ ಸಭಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಮೊದಲ ದಿನ 200ರಷ್ಟು ಡೋಸ್ ಗಳು ಲಭ್ಯವಿದ್ದು ಮಾಹಿತಿ ಪಡೆದ ಸಾರ್ವಜನಿಕರು ಮುಂಜಾನೆಯಿಂದಲೇ ಧಾವಿಸಿ ಸುಮಾರು 500ರಷ್ಟು ಸಂಖ್ಯೆಯಲ್ಲಿ ನೆರೆದಿದ್ದರು. ಬಂದವರಲ್ಲಿ ಮೊದಲ 200 ಜನರ ನೋಂದಣಿ ಮಾಡಿ ಉಳಿದ ಸಾರ್ವಜನಿಕರನ್ನು ಲಸಿಕೆ ಬಂದ ಮೇಲೆ ಮಾಹಿತಿ ನೀಡುವುದಾಗಿ ಮನವರಿಕೆ ಮಾಡಲಾಯಿತು.


ಈ ಸಂಧರ್ಭದಲ್ಲಿ ಹಳೇ ಮಾರಿಯಮ್ಮ ದೇಗುಲ ಆಡಳಿತ ಮೊಕ್ತೆಸರ ಪ್ರಸಾದ್ ಶೆಣೈ, ಕಾಪುವಿನ ಪುರಸಭಾ    ಸದಸ್ಯರಾದ ಅಶ್ವಿಣಿ,ಅರುಣ್ ಶೆಟ್ಟಿ ಪಾದೂರು,ಉಸ್ಮಾನ್,ಹಮೀದ್, ಕಾಪು ಠಾಣ ಆರಕ್ಷಕರು ಹಾಗೂ ಸಿಬ್ಬಂದಿ ವರ್ಗ,ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಇಲಾಖೆಯವರು ಸಿಬ್ಬಂದಿ ಮೊದಲಾದವರು ಉಪಸ್ಥಿತರಿದ್ದರು.

ಜನಸಂದಣಿ ಹತೋಟಿ ತಂದ ಕಾಪು ಪಿಎಸೈ ರಾಘವೇಂದ್ರ.

ಲಸಿಕೆ ನೀಡುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಬೆಳಗ್ಗಿನ ಜಾವ 7 ಗಂಟೆಯ ಸುಮಾರಿಗೆ ಜನ ಸಭಾಗೃಹ ಸುತ್ತಾ ಸೇರಿಕೊಂಡು ಕೆಲವೊಂದು ಸಮಯ ಗೊಂದಲದ ವಾತಾವರಣ ಉಂಟಾಗಿತ್ತು ಕೂಡಲೇ ಸಾರ್ವಜನಿಕರ ಫೋಯ ಕರೆಗೆ ಸ್ಪಂದಿಸಿ ಸ್ಥಳಕಾಗಮಿಸಿದ ಕಾಪು ಪಿಎಸೈ ರಾಘವೇಂದ್ರ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮನವರಿಕೆ ಮಾಡಿ ಜನ ಸಂದಣಿ ನಿಯಂತ್ರಣಕ್ಕೆ ತರಲು ಹರಸಾಹಸ ಪಟ್ಟರು.

ಮಾಹಿತಿ ಕೊರತೆ ಮುಗಿ ಬಿದ್ದ ಜನ
ವ್ಯಾಕ್ಸಿನೇಷನ್‌ ವಿಚಾರವಾಗಿ ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಮೇಸೆಜುಗಳಲ್ಲಿ ಸ್ಪಷ್ಟವಾಗಿ ಲಸಿಕೆ ಎಷ್ಟಿದೆ ಮತ್ತು ಬಂದ ಜನರಿಗೆ ಟೋಕನ್ ನೀಡುವಲ್ಲಿ ವಿಫಲವಾದ ಪರಿಣಾಮ ಜನ ಸಮಯ ಸಾಗುತ್ತಿದ್ದಂತೆ ಮುಗಿಬಿದ್ದಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ -ವಿಶ್ವನ್ಯೂಸ್24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago