ಉಡುಪಿ, ಜೂ.8: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ (52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಪತ್ನಿ, ಮಗ ಸಹಿತ ಮೂವರು ಆರೋಪಿಗಳು ದೋಷಿಗಳು ಎಂದು ಆದೇಶ ನೀಡಿದೆ.
ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ ಆರೋಪಿಗಳಾಗಿದ್ದಾರೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಇಂದು ಮಧ್ಯಾಹ್ನ ನ್ಯಾಯಾಲಯದ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಪ್ರಕಟಿಸಲಿದ್ದಾರೆ.
ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ..
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…