ಕುಂದಾಪುರ: ಉದಯ್ ಗಾಣಿಗ ಕೊಲೆ ಪ್ರಕರಣ : ಸಂಘಟನೆ ಮುಖಂಡ ಸಹಿತ ಒಟ್ಟು ಆರು ಮಂದಿಯ ಬಂಧನ – Vishwanews24
ಕುಂದಾಪುರ: ಉದಯ್ ಗಾಣಿಗ ಕೊಲೆ ಪ್ರಕರಣ : ಸಂಘಟನೆ ಮುಖಂಡ ಸಹಿತ ಒಟ್ಟು ಆರು ಮಂದಿಯ ಬಂಧನ – Vishwanews24
ಕುಂದಾಪುರ: ಶನಿವಾರ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತಡ ರಾತ್ರಿಯೇ ಪ್ರಮುಖ ಆರೋಪಿ ಎಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನ್ನು ಮಧ್ಯರಾತ್ರಿಯೇ ಬಂಧಿಸಲಾಗಿತ್ತು. ಸೋಮವಾರ ಬೆಳಿಗ್ಗೆ ಇನ್ನೋರ್ವ ಆರೋಪಿ ಸಂಘಟನೆ ಮುಖಂಡ ಬಾಲಚಂದ್ರ ಭಟ್ ಹಾಗೂ ರಾಜೇಶ್ ಭಟ್ ಎಂಬಾತನನ್ನು ಬಂಧಿಸಲಾಗಿದ್ದು ಮೂವರೂ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬುಧವಾರ ಶಂಕರನಾರಾಯಣ ಪೊಲೀಸರು ಯಡಮೊಗೆ ನಿವಾಸಿ ಮನೋಜ್ ಕುಮಾರ್(26), ಎಡಮೊಗ್ಗೆ ಗ್ರಾಮ ಪಂಚಾಯತ್ ಸದಸ್ಯ ಸದಾಶಿವ ನಾಯ್ಕ್ ಹಾಗೂ ಸ್ಥಳೀಯ ನಿವಾಸಿ ವೇಣುಗೋಪಾಲ ಶೆಟ್ಟಿ ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತರಿಗೆ ಜೂನ್ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಗಳಿಗೆ ರಕ್ಷಣೆ ನೀಡಿದ ಆರೋಪದಲ್ಲಿ ಬಿಜೆಪಿಯ ಜಿಲ್ಲಾ ನಾಯಕನ ಸಹಿತ ಪ್ರಮುಖ ಆರೋಪಿಯ ಪುತ್ರನನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
