ರಾಜ್ಯದಲ್ಲಿ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ : ಕೆ.ಸುಧಾಕರ್ – Vishwanews24
ರಾಜ್ಯದಲ್ಲಿ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ : ಕೆ.ಸುಧಾಕರ್ – Vishwanews24
ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ನಷ್ಟವಾಗಿದೆ. ಹೀಗಾಗಿ ಕೆಲವು ವಿನಾಯಿತಿ ಕೊಡಲಾಗಿದೆ. ಅಳೆದು ತೂಗಿ ಈ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ವಿನಾಯತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶೇ.10ಕ್ಕಿಂತ ಹೆಚ್ಚು ಸೋಂಕು ಇರುವ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. 5% ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್ ಗಳನ್ನು ಮಾಡಲು ಕ್ರಮವಹಿಸಬೇಕು ಎಂದರು.
ಗ್ರಾಮಗಳ ಸೀಲ್ ಡೌನ್: ಅಂತಾರಾಜ್ಯ, ಹೊರ ದೇಶದಿಂದ ಬರುವವರಿಗೆ ಚೆಕ್ ಪಾಯಿಂಟ್ ಗಳಲ್ಲಿ ಕಡ್ಡಾಯವಾಗಿ ಟೆಸ್ಟ್ ಮಾಡಬೇಕು. ಒಂದು ಗ್ರಾಮದಲ್ಲಿ ಐದು ಸೋಂಕಿತರು ಕಂಡು ಬಂದರೇ ಅ ಗ್ರಾಮವನ್ನೇ ಸೀಲ್ ಡೌನ್ ಮಾಡಬೇಕು. ಗ್ರಾಮ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಬೇಕು ಎಂದರು.
