ಉಡುಪಿ : ಮಮತೆಯ ತೊಟ್ಟಿಲು ಆಶ್ರಮದಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ – Vishwanews24

Featured, ಉಡುಪಿ

ಉಡುಪಿ : ಮಮತೆಯ ತೊಟ್ಟಿಲು ಆಶ್ರಮದಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ – Vishwanews24

ಉಡುಪಿ: ಜಿಲ್ಲಾ ರಾಹುಲ್ ಗಾಂಧಿ ಬ್ರಿಗೇಡ್ ವತಿಯಿಂದ ರಾಹುಲ್ ಗಾಂಧಿ 51ನೇ ಹುಟ್ಟುಹಬ್ಬ ಮಮತೆಯ ತೊಟ್ಟಿಲು ಆಶ್ರಮದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ಮೊಹಮ್ಮದ್ ಜಮೀರ್ ಅವರ ನೇತೃತ್ವದಲ್ಲಿ ಆಶ್ರಮದ ಮಕ್ಕಳಿಗೆ 25 ಕುರ್ಚಿ, ಅಕ್ಕಿ, ಹಾಗೂ ಸಿಹಿ ತಿಂಡಿ ಹಂಚಿ ವಿಶೇಷ ರೀತಿಯಲ್ಲಿ ಮಕ್ಕಳ ಜೊತೆ ಹುಟ್ಟುಹಬ್ಬದ ಪ್ರಯುಕ್ತ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ ಮಮತೆಯ ತೊಟ್ಟಿಲು ಆಶ್ರಮದ ಕೆಲಸ ಕಾರ್ಯಗಳು ಶ್ಲಾಘನೀಯ ಈ ಆಶ್ರಮಕ್ಕೆ ಇನ್ನು ಮುಂದೆ ಪ್ರತಿ ತಿಂಗಳಿಗೆ 50 ಕೆಜಿ ಅಕ್ಕಿಯನ್ನು ಒಂದು ವರ್ಷ ನಿರಂತರವಾಗಿ ಡಿಕೆಶಿ ಅಭಿಮಾನಿ ಬಳಗ, ಯೂತ್ ಕಾಂಗ್ರೆಸ್, ವಿದ್ಯಾರ್ಥಿ ಸಂಘಟನೆ, ರಾಹುಲ್ ಗಾಂಧಿ ಬ್ರಿಗೇಡ್ ವತಿಯಿಂದ ನೀಡುವುದಾಗಿ ಆಶ್ರಮದ ಆಡಳಿತ ಮಂಡಳಿಗೆ ತಿಳಿಸಿದ್ದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಯುವರಾಜ್, ನಗರ ಸಭೆ ಸದಸ್ಯೆ ಅಮೃತ ಕೃಷ್ಣಮೂರ್ತಿ ಆಚಾರ್ಯ, ಜಿಲ್ಲಾ ವಿಧ್ಯಾರ್ಥಿ ಸಂಘಟನೆ ಅಧ್ಯಕ್ಷ ಸೌರಬ್ ಬಲ್ಲಳ್ , ಕೆಪಿಸಿಸಿ ಸೋಷಿಯಲ್ ಮೀಡಿಯಾ ಉಡುಪಿ ಜಿಲ್ಲೆ ಮಾಜಿ ಕೋ ಆರ್ಡಿನೇಟರ್ ಪ್ರಭಾಕರ ಆಚಾರ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಗುರು ಪ್ರಸಾದ್ ಶೆಟ್ಟಿ, ಡಿಕೆಶಿ ಅಭಿಮಾನಿ ಬಳಗದ ಉಪಾಧ್ಯಕ್ಷ ಮಹೇಶ್ ಸುವರ್ಣ ಮಲ್ಪೆ, ಪ್ರಧಾನ ಕಾರ್ಯದರ್ಶಿ ಗಣೇಶ್, ವಿಧ್ಯಾರ್ಥಿ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಸೋದ್, ಹಾಗೂ ಆಕ್ರಮ್, ಪ್ರಥಮ್ ಪೂಜಾರಿ, ಫಯಲ್, ಮುನ್ನ, ನದಿಮಾ, ನಿಯಾಜ್, ಕ್ರಿಷ್ಟನ್, ಮೂಫಿದ್,ಗಣೇಶ್ ಶೇರಿಗರ್, ಓಂಕರ್ ಸುನಿಲ್, ಮುಂತಾದವರು ಉಪಸ್ಥಿತರಿದರು.