Featured

ಪಡುಬಿದ್ರಿ : ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸಲು ಆಗ್ರಹಿಸಿ ನವಯುಗ ಕಚೇರಿಗೆ ಮುತ್ತಿಗೆ -Vishwanews24

ಪಡುಬಿದ್ರಿ : ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಮುಗಿಸಲು ಆಗ್ರಹಿಸಿ ನವಯುಗ ಕಚೇರಿಗೆ ಮುತ್ತಿಗೆ -Vishwanews24

ಪಡುಬಿದ್ರಿ: ಚತುಃಷ್ಪಥ ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣರ್ಗೊಳಿಸುವಂತೆ ಪಡುಬಿದ್ರಿ ಗ್ರಾಪಂ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರ ನೇತೃತ್ವದಲ್ಲಿ ನವಯುಗ ಶಾಖಾ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರು ಆಗ್ರಹಿಸಿದ್ದಾರೆ.

ಕಚೇರಿಗೆ ಬೀಗ ಜಡಿಯಲು ನಿರ್ಧರಿಸಿದ ಗ್ರಾ. ಪಂ. ಸದಸ್ಯರು ನವಯುಗ ಯೋಜನಾ ಪ್ರಬಂಧಕ ಶ್ರೀನಿವಾಸ್ ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು. ಮೂರು ತಿಂಗಳಿನಿಂದ ಮನವಿ ಮಾಡಿಕೊಂಡರೂ ಕಂಪೆನಿ ಗ್ರಾ. ಪಂ ವಿನಂತಿಯನ್ನು ಕಡೆಗಣಿಸುತ್ತಿದೆ. ಹಾಗಾಗಿ ಅಧಿಕಾರಿ ಕಚೇರಿಗೆ ಬಾರದಿದ್ದಲ್ಲಿ ಕಚೇರಿಗೆ ಬೀಗ ಜಡಿಯುವುದು ಎಂಬುದಾಗಿ ಅಚಲ ನಿರ್ಧಾರವನ್ನು ಗ್ರಾ. ಪಂ. ಪ್ರಕಟಿಸಿದ ಬಳಿಕ ಯೋಜನಾ ಪ್ರಬಂಧಕ ಶ್ರೀನಿವಾಸ್ ಪಡುಬಿದ್ರಿ ಕಚೇರಿಗಾಗಮಿಸಿದರು.

ತಕ್ಷಣ ಅವರನ್ನು ಅವೈಜ್ಞಾನಿಕ ಕಾಮಗಾರಿಗಳು ನಡೆದಿರುವ ಪಡುಬಿದ್ರಿಯ ವಿವಿದೆಡೆಗಳಿಗೆ ಕರೆದೊಯ್ಯಲಾಯಿತು. ಪರಿಸ್ಥಿತಿಯನ್ನು ಅಧ್ಯಕ್ಷ ರವಿ ಶೆಟ್ಟಿ ಮತ್ತಿತರರು ವಿವರಿಸಿದರು. ತಿಂಗಳೊಳಗೆ ಪರಿಹಾರವನ್ನು ನವಯುಗ ಕಾಮಗಾರಿಗಳಿಂದ ಕಂಡುಕೊಳ್ಳುವಂತಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆಯನ್ನು ಸಂಘಟಿಸಲಾಗುವುದೆಂದು ಗ್ರಾಪಂ. ಅಧ್ಯಕ್ಷ ರವಿ ಶೆಟ್ಟಿ ನವಯುಗ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಗ್ರಾ. ಪಂ. ಉಪಾಧ್ಯಕ್ಷೆ ಯಶೋದಾ, ತಾ. ಪಂ. ಮಾಜಿ ಸದಸ್ಯೆ ನೀತಾ ಗುರುರಾಜ್, ಗ್ರಾ.ಪಂ. ಸದಸ್ಯರಾದ ನವೀನ್ ಶೆಟ್ಟಿ, ಗಣೇಶ್ ಕೋಟ್ಯಾನ್ ಸಹಿತ ಎಲ್ಲಾ 32 ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

21 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago