ಪಡುಬಿದ್ರಿ: ಚತುಃಷ್ಪಥ ಹೆದ್ದಾರಿ ಅಪೂರ್ಣ ಕಾಮಗಾರಿಯನ್ನು ತಿಂಗಳೊಳಗೆ ಪೂರ್ಣರ್ಗೊಳಿಸುವಂತೆ ಪಡುಬಿದ್ರಿ ಗ್ರಾಪಂ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರ ನೇತೃತ್ವದಲ್ಲಿ ನವಯುಗ ಶಾಖಾ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರು ಆಗ್ರಹಿಸಿದ್ದಾರೆ.
ಕಚೇರಿಗೆ ಬೀಗ ಜಡಿಯಲು ನಿರ್ಧರಿಸಿದ ಗ್ರಾ. ಪಂ. ಸದಸ್ಯರು ನವಯುಗ ಯೋಜನಾ ಪ್ರಬಂಧಕ ಶ್ರೀನಿವಾಸ್ ಸ್ಥಳಕ್ಕೆ ಬರಬೇಕೆಂದು ಒತ್ತಾಯಿಸಿದರು. ಮೂರು ತಿಂಗಳಿನಿಂದ ಮನವಿ ಮಾಡಿಕೊಂಡರೂ ಕಂಪೆನಿ ಗ್ರಾ. ಪಂ ವಿನಂತಿಯನ್ನು ಕಡೆಗಣಿಸುತ್ತಿದೆ. ಹಾಗಾಗಿ ಅಧಿಕಾರಿ ಕಚೇರಿಗೆ ಬಾರದಿದ್ದಲ್ಲಿ ಕಚೇರಿಗೆ ಬೀಗ ಜಡಿಯುವುದು ಎಂಬುದಾಗಿ ಅಚಲ ನಿರ್ಧಾರವನ್ನು ಗ್ರಾ. ಪಂ. ಪ್ರಕಟಿಸಿದ ಬಳಿಕ ಯೋಜನಾ ಪ್ರಬಂಧಕ ಶ್ರೀನಿವಾಸ್ ಪಡುಬಿದ್ರಿ ಕಚೇರಿಗಾಗಮಿಸಿದರು.
ತಕ್ಷಣ ಅವರನ್ನು ಅವೈಜ್ಞಾನಿಕ ಕಾಮಗಾರಿಗಳು ನಡೆದಿರುವ ಪಡುಬಿದ್ರಿಯ ವಿವಿದೆಡೆಗಳಿಗೆ ಕರೆದೊಯ್ಯಲಾಯಿತು. ಪರಿಸ್ಥಿತಿಯನ್ನು ಅಧ್ಯಕ್ಷ ರವಿ ಶೆಟ್ಟಿ ಮತ್ತಿತರರು ವಿವರಿಸಿದರು. ತಿಂಗಳೊಳಗೆ ಪರಿಹಾರವನ್ನು ನವಯುಗ ಕಾಮಗಾರಿಗಳಿಂದ ಕಂಡುಕೊಳ್ಳುವಂತಾಗಬೇಕು. ಇಲ್ಲದಿದ್ದಲ್ಲಿ ಉಗ್ರ ಪ್ರತಿಭಟನೆಯನ್ನು ಸಂಘಟಿಸಲಾಗುವುದೆಂದು ಗ್ರಾಪಂ. ಅಧ್ಯಕ್ಷ ರವಿ ಶೆಟ್ಟಿ ನವಯುಗ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಗ್ರಾ. ಪಂ. ಉಪಾಧ್ಯಕ್ಷೆ ಯಶೋದಾ, ತಾ. ಪಂ. ಮಾಜಿ ಸದಸ್ಯೆ ನೀತಾ ಗುರುರಾಜ್, ಗ್ರಾ.ಪಂ. ಸದಸ್ಯರಾದ ನವೀನ್ ಶೆಟ್ಟಿ, ಗಣೇಶ್ ಕೋಟ್ಯಾನ್ ಸಹಿತ ಎಲ್ಲಾ 32 ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…