Featured

ಉಡುಪಿ : ತೆರಿಗೆ ಪಾವತಿಸದೇ ಸಂಚರಿಸುತ್ತಿದ್ದ ಖಾಸಗಿ ಬಸ್ ಮುಟ್ಟುಗೋಲು -Vishwanews24

ಉಡುಪಿ : ತೆರಿಗೆ ಪಾವತಿಸದೇ ಸಂಚರಿಸುತ್ತಿದ್ದ ಖಾಸಗಿ ಬಸ್ ಮುಟ್ಟುಗೋಲು -Vishwanews24

ಉಡುಪಿ : ರಾಜ್ಯ ಸಾರಿಗೆ ಆಯುಕ್ತರ ಆದೇಶ ಹಾಗೂ ಮೋಟಾರು ವಾಹನ ಕಾಯ್ದೆಯನ್ವಯ ಜಿಲ್ಲೆಯ ಎಲ್ಲಾ ಖಾಸಗಿ ಬಸ್ಸು, ಮ್ಯಾಕ್ಸಿಕ್ಯಾಬ್ ಹಾಗೂ ಟ್ಯಾಕ್ಸಿಗಳು ಮುಂಗಡ ತೆರಿಗೆ ಪಾವತಿಸಿ, ಅನುಪಯುಕ್ತತೆಯಿಂದ ಬಿಡುಗಡೆಗೊಳಿಸಿಕೊಂಡು ಮಾತ್ರ ವಾಹನವನ್ನು ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಆದೇಶಿಸಿರುತ್ತಾರೆ.

ಆದರೆ ಸೋಮವಾರದಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಚೇರಿಯ ಮೋಟಾರು ವಾಹನ ನಿರೀಕ್ಷಕರು, ನಿಯಮ ಉಲ್ಲಂಘಿಸಿ ವಾಹನ ತೆರಿಗೆ ಪಾವತಿಸದೇ, ಅದ್ಯರ್ಪಣಯಿಂದ ಬಿಡುಗಡೆಗೊಳಿಸಿಕೊಳ್ಳದೇ ಖಾಸಗಿ ಕಂಪೆನಿಯ ನೌಕರರನ್ನು ಸಾರ್ವಜನಿಕ ರಸ್ತೆಯ ಮೇಲೆ ಕೊಂಡೊಯ್ಯುತ್ತಿದ್ದ ಉಡುಪಿಯಿಂದ ಹೆಬ್ರಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು (ಕೆಎ-51/ ಬಿ 9646) ತಪಾಸಣೆ ನಡೆಸಿ, ವಾಹನವನ್ನು ಮುಟ್ಟುಗೋಲು ಹಾಕಿ, ಕಾನೂನು ರೀತಿಯ ಕ್ರಮ ಕೈಗೊಂಡು, ಮುಂದಿನ ಕ್ರಮಕ್ಕಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಒಪ್ಪಿಸಿರುತ್ತಾರೆ.

ಆದ್ದರಿಂದ ಅನಾವಶ್ಯಕವಾಗಿ ಸಾರ್ವಜನಿಕರಿಗೆ ತೊಂದರೆ ನೀಡದೇ, ಮುಂಗಡ ವಾಹನ ತೆರಿಗೆ ಪಾವತಿಯೊಂದಿಗೆ ಅದ್ಯರ್ಪಣದಿಂದ ಬಿಡುಗಡೆಗೊಳಿಸಿದ ನಂತರ ಮಾತ್ರ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಓಡಾಡಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಜೆ.ಪಿ ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago