ಉಡುಪಿ : ರಾಜ್ಯ ಸಾರಿಗೆ ಆಯುಕ್ತರ ಆದೇಶ ಹಾಗೂ ಮೋಟಾರು ವಾಹನ ಕಾಯ್ದೆಯನ್ವಯ ಜಿಲ್ಲೆಯ ಎಲ್ಲಾ ಖಾಸಗಿ ಬಸ್ಸು, ಮ್ಯಾಕ್ಸಿಕ್ಯಾಬ್ ಹಾಗೂ ಟ್ಯಾಕ್ಸಿಗಳು ಮುಂಗಡ ತೆರಿಗೆ ಪಾವತಿಸಿ, ಅನುಪಯುಕ್ತತೆಯಿಂದ ಬಿಡುಗಡೆಗೊಳಿಸಿಕೊಂಡು ಮಾತ್ರ ವಾಹನವನ್ನು ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಆದೇಶಿಸಿರುತ್ತಾರೆ.
ಆದರೆ ಸೋಮವಾರದಂದು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಕಚೇರಿಯ ಮೋಟಾರು ವಾಹನ ನಿರೀಕ್ಷಕರು, ನಿಯಮ ಉಲ್ಲಂಘಿಸಿ ವಾಹನ ತೆರಿಗೆ ಪಾವತಿಸದೇ, ಅದ್ಯರ್ಪಣಯಿಂದ ಬಿಡುಗಡೆಗೊಳಿಸಿಕೊಳ್ಳದೇ ಖಾಸಗಿ ಕಂಪೆನಿಯ ನೌಕರರನ್ನು ಸಾರ್ವಜನಿಕ ರಸ್ತೆಯ ಮೇಲೆ ಕೊಂಡೊಯ್ಯುತ್ತಿದ್ದ ಉಡುಪಿಯಿಂದ ಹೆಬ್ರಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು (ಕೆಎ-51/ ಬಿ 9646) ತಪಾಸಣೆ ನಡೆಸಿ, ವಾಹನವನ್ನು ಮುಟ್ಟುಗೋಲು ಹಾಕಿ, ಕಾನೂನು ರೀತಿಯ ಕ್ರಮ ಕೈಗೊಂಡು, ಮುಂದಿನ ಕ್ರಮಕ್ಕಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಒಪ್ಪಿಸಿರುತ್ತಾರೆ.
ಆದ್ದರಿಂದ ಅನಾವಶ್ಯಕವಾಗಿ ಸಾರ್ವಜನಿಕರಿಗೆ ತೊಂದರೆ ನೀಡದೇ, ಮುಂಗಡ ವಾಹನ ತೆರಿಗೆ ಪಾವತಿಯೊಂದಿಗೆ ಅದ್ಯರ್ಪಣದಿಂದ ಬಿಡುಗಡೆಗೊಳಿಸಿದ ನಂತರ ಮಾತ್ರ ವಾಹನವನ್ನು ಸಾರ್ವಜನಿಕ ರಸ್ತೆಯಲ್ಲಿ ಓಡಾಡಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಜೆ.ಪಿ ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…