Featured

5 ಕೋಟಿ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಾಟ ; ಮೇರಾ ಪರಿವಾರ್ ಭಾಜಪ ಪರಿವಾರ್’ ಎಂಬ ಹೊಸ ಅಭಿಯಾನಕ್ಕೆ ಚಾಲನೆ – Vishwanews24

ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುವ ದೃಢ ಸಂಕಲ್ಪದೊಂದಿಗೆ ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಪಕ್ಷದ ಹೊಸ ಘೋಷ ವಾಕ್ಯವನ್ನು ಬಿಡುಗಡೆಗೊಳಿಸಿ ಚುನಾವಣಾ ಕಣಕ್ಕೆ ಅಧಿಕೃತವಾಗಿ ಬಿ.ಜೆ.ಪಿ. ಚಾಲನೆ ನೀಡಿತ್ತು.
ಕಮಲ ಪಕ್ಷವು ಅದರ ಮುಂದುವರಿದ ಭಾಗವಾಗಿ ಮಂಗಳವಾರದಂದು ‘ಮೇರಾ ಪರಿವಾರ್ ಭಾಜಪ ಪರಿವಾರ್’ ಎಂಬ ಹೊಸ ಅಭಿಯಾನಕ್ಕೆ ಚಾಲನೆ ನೀಡಿದೆ. ಸರಿಸುಮಾರು ಒಂದು ತಿಂಗಳ ಕಾಲ ನಡೆಯಲಿರುವ ಈ ಅಭಿಯಾನದಲ್ಲಿ ದೇಶಾದ್ಯಂತ ಸುಮಾರು 5 ಕೋಟಿ ಮನೆಗಳಲ್ಲಿ ಪಕ್ಷದ ಬಾವುಟವನ್ನು ಹಾರಿಸುವ ಗುರಿಯನ್ನು ಇರಿಸಿಕೊಳ್ಳಲಾಗಿದೆ..
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಅಹಮದಾಬಾದ್ ನಲ್ಲಿರುವ ತನ್ನ ಮನೆಯಲ್ಲಿ ಪಕ್ಷದ ಧ್ವಜವನ್ನು ಹಾರಿಸುವ ಮೂಲಕ ಮತ್ತು ಸ್ಟಿಕ್ಕರ್ ಅಂಟಿಸುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಆಡಿಟೋರಿಯಂನಲ್ಲಿ ಈ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆಯಲಿದೆ, ಈ ಸಂದರ್ಭದಲ್ಲಿ ಅಮಿತ್ ಶಾ ಅವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ನರೇಂದ್ರ ಮೋದಿಯವರನ್ನು ಮತ್ತೆ ಈ ದೇಶದ ಪ್ರಧಾನಮಂತ್ರಿಯನ್ನಾಗಿ ಆಯ್ಕೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಪಕ್ಷದ ಬಾವುಟಗಳನ್ನು ಹಾರಿಸಿ ಬಳಿಕ ಅವುಗಳ ಫೊಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತೆ ಅಮಿತ್ ಶಾ ಅವರು ಮನವಿ ಮಾಡಿಕೊಂಡಿರುವ ಧ್ವನಿ ಮುದ್ರಿಕೆಯನ್ನು ಇದೇ ಸಂದರ್ಭದಲ್ಲಿ ಪಕ್ಷ ಬಿಡುಗಡೆಗೊಳಿಸಿದೆ. ಈ ರಾಷ್ಟ್ರವ್ಯಾಪಿ ಅಭಿಯಾನವು ನಾಲ್ಕು ಹಂತಗಳಲ್ಲಿ ನಡೆಯಲಿದ್ದು ಮಾರ್ಚ್ 2ರಂದು ಅಂತ್ಯಗೊಳ್ಳಲಿದೆ.
Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago