Featured

5 ಬಂಗಾರದ ಪದಕಗಳೊಂದಿಗೆ ಐಎಸ್ಎಸ್​ಎಫ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಭಾರತ -Vishwanews24

ನವದೆಹಲಿ: ಬ್ರೆಜಿಲ್​ನ ರಿಯೋ ಡಿ ಜನೈರೋದಲ್ಲಿ ಮುಕ್ತಾಯಗೊಂಡ ಇಂಟರ್​​ನ್ಯಾಷನಲ್ ಶೂಟಿಂಗ್ ಸ್ಪೋರ್ಟ್​ ಫೆಡರೇಷನ್ (ಐಎಸ್ಎಸ್​ಎಫ್) ವರ್ಲ್ಡ್ ಕಪ್ ಅಭಿಯಾನದಲ್ಲಿ 5 ಬಂಗಾರದ ಪದಕಗಳೊಂದಿಗೆ ಭಾರತ ಟೂರ್ನಿಗೆ ವಿದಾಯ ಹೇಳಿದೆ.

ಕ್ರೀಡಾಕೂಟದ ಅಂತಿಮ ದಿನವಾದ ಮಂಗಳವಾರ ಮನು ಬಾರ್ಕರ್ ಮತ್ತು ಸೌರಭ್ ಚೌಧರಿ 10 ಮೀಟರ್ ಏರ್ ಪಿಸ್ತೂಲ್​​ನ ಮಿಶ್ರ ಡಬಲ್ಸ್ ವಿಭಾಗದಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ಹತ್ತು ಮೀಟರ್ ಏರ್​ ರೈಫಲ್ ವಿಭಾಗದಲ್ಲಿ ವಿಶ್ವದ ನಂಬರ್​ ಒನ್ ಆಗಿರುವ ಅಪೂರ್ವಿ ಚಂಡೇಲಾ, ದೀಪಕ್ ಕುಮಾರ್ ಜೋಡಿ, ಅಂತಿಮ ದಿನ ಮಿಶ್ರ ಡಬಲ್ಸ್​ ಏರ್​ ರೈಫಲ್ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದರು. ಇತರ ವಿಭಾಗದಲ್ಲಿ ಸ್ಪರ್ಧಿಸಿದ್ದ ಯಶಸ್ವಿನಿ ದೇಸ್ವಾಲ್ ಮತ್ತು ಅಭಿಷೇಕ್ ವರ್ಮಾ ಬೆಳ್ಳಿ ಪದಕಗಳಿಗೆ ತೃಪ್ತಿಪಟ್ಟರು.

ಭಾರತ ಈ ಟೂರ್ನಿಯಲ್ಲಿ ಐದು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿದೆ.  ಈ ಮೂಲಕ ಐಎಸ್​ಎಸ್​ಎಫ್ ಸೀನಿಯರ್ ವರ್ಲ್ಡ್ ಕಪ್ ಸೇರಿದಂತೆ 2019ರಲ್ಲಿ ನಡೆದ ಐಎಸ್​ಎಸ್​ಎಫ್​​ನ ನಾಲ್ಕು ಟೂರ್ನಿಗಳಲ್ಲಿ 16 ಚಿನ್ನ, 4 ಬೆಳ್ಳಿ ಹಾಗೂ 2 ಕಂಚು ಸೇರಿ 22 ಪದಕಗಳೊಂದಿಗೆ ಭಾರತ ಐಎಸ್ಎಸ್​ಎಫ್ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

2 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago