Featured

5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು  : ಹೈಕೋರ್ಟ್ ಮಹತ್ವದ ತೀರ್ಪು – Vishwanews24

5 ಮತ್ತು 8 ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು  : ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: 5 ಮತ್ತು 8ನೇ ತರಗತಿ ಮಕ್ಕಳಿಗೆ ರಾಜ್ಯ ಶಿಕ್ಷಣ ಇಲಾಖೆ ನಡೆಸಲು ನಿರ್ಧರಿಸಲಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಇದೇ ಮಾ.13 ರಿಂದ ಆರಂಭವಾಗಬೇಕಿದ್ದ 5, 8ನೇ ತರಗತಿಯ (5 and 8th class) ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ (Karnataka High Court) ಆದೇಶ ಹೊರಡಿಸಿದೆ. ಎಂದಿನಂತೆ ಸಾಮಾನ್ಯ ವಾರ್ಷಿಕ ಪರೀಕ್ಷೆ ನಡೆಸಬೇಕು. ಶಾಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಬೇಕು ಎಂದು ಸೂಚಿಸಿದೆ. ಅನುದಾನ‌ರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕ ಸದಸ್ಯ ಪೀಠ ಈ ತೀರ್ಮಾನ ಪ್ರಕಟಿಸಿದೆ.

ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಪೀಠದಿಂದ ಈ ಮಹತ್ವದ ಆದೇಶ ಹೊರ ಬಿದ್ದಿದೆ. ಈ ಮೂಲಕ ಸದ್ಯ 5 ಮತ್ತು 8ನೇ ತರಗತಿ ಮಕ್ಕಳಿಗೆ ಇದ್ದ ಪಬ್ಲಿಕ್‌ ಎಕ್ಸಾಂ ಆತಂಕ ದೂರವಾಗಿದೆ. ಅರ್ಜಿದಾರರ ಪರವಾಗಿ ವಕೀಲ ಕೆ.ವಿ.ಧನಂಜಯ್ ಶಾಸಕಾಂಗದಲ್ಲಿ ಚರ್ಚೆ ಆಗದೇ ಅಧಿಕಾರಿಗಳೇ ನಿರ್ಧಾರ ಮಾಡಿದ್ದರು ಎಂದು ವಾದಿಸಿದರು. ಈ ಆದೇಶದ ಬಳಿಕ ಆಯಾಯ ಶಾಲೆಗಳು ಹೊಸದಾಗಿ ಪರೀಕ್ಷೆ ದಿನಾಂಕ ನಿಗದಿಗೆ ಅವಕಾಶ ಮಾಡಿ ಕೊಡಲಾಗಿದೆ. ಜೊತೆಗೆ ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಸೂಚನೆ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago