Featured

5 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳಲ್ಲಿ ಸಚಿವೆ ಶೋಭಾ ಕರಂದ್ಲಾಜೆಗೆ ಸ್ಥಾನ -Vishwanews24

5 ರಾಜ್ಯಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳಲ್ಲಿ ಸಚಿವೆ ಶೋಭಾ ಕರಂದ್ಲಾಜೆಗೆ ಸ್ಥಾನ -Vishwanews24

ನವದೆಹಲಿ : ಮುಂದಿನ ವರ್ಷ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಎಲ್ಲ ಪಕ್ಷಗಳೂ ತಯಾರಿ ನಡೆಸುತ್ತಿದ್ದು ಬಿಜೆಪಿ ಕೂಡ ತಯಾರಿ ಪ್ರಾರಂಭಿಸಿ ಐದು ರಾಜ್ಯಗಳ ಉಸ್ತುವಾರಿಗಳ ಹೆಸರನ್ನು ಬುಧವಾರ ಪ್ರಕಟಿಸಿದೆ.

ಉತ್ತರ ಪ್ರದೇಶದ ಉಸ್ತುವಾರಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ನೀಡಲಾಗಿದ್ದು, ಧರ್ಮೇಂದ್ರ ಪ್ರಧಾನ್ ಸೇರಿದಂತೆ 8 ಕೇಂದ್ರ ಸಚಿವರಿಗೆ ಉತ್ತರ ಪ್ರದೇಶದ ಜವಾಬ್ದಾರಿಯನ್ನು ನೀಡಲಾಗಿದೆ.

ಇನ್ನು ಪ್ರಧಾನ್ ಅವರು ಮುಖ್ಯ ಉಸ್ತುವಾರಿಯಾಗಿರಲಿದ್ದಾರೆ. ಅವರ ಜೊತೆ ಅನುರಾಗ್ ಠಾಕೂರ್, ಅರ್ಜುನ್ ರಾಮ್ ಮೇಘ್ವಾಲ್, ಸರೋಜ್ ಪಾಂಡೆ, ಶೋಭಾ ಕರಂದ್ಲಾಜೆ, ಕ್ಯಾಪ್ಟನ್ ಅಭಿಮನ್ಯು, ಅನ್ನಪೂರ್ಣ ದೇವಿ ಮತ್ತು ವಿವೇಕ್ ಠಾಕೂರ್ ಅವರಿಗೆ ಸಹ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ.

ಪಂಜಾಬ್ ಜವಾಬ್ದಾರಿಯನ್ನು ಕ್ಯಾಬಿನೆಟ್ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ನೀಡಲಾಗಿದ್ದು, ಪಂಜಾಬಿನಲ್ಲಿ, ಶೆಖಾವತ್ ಜೊತೆ ಹರ್ದೀಪ್ ಪುರಿ, ಮೀನಾಕ್ಷಿ ಲೇಖಿ, ವಿನೋದ್ ಚಾವ್ಡಾ ಇರಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉತ್ತರಾಖಂಡದ ಮುಖ್ಯ ಉಸ್ತುವಾರಿ ವಹಿಸಲಿದ್ದಾರೆ.

ಲಾಕೆಟ್ ಚಟರ್ಜಿ ಮತ್ತು ಸರ್ದಾರ್ ಆರ್ ಪಿ ಸಿಂಗ್ ಅವರು ಕೂಡ ಪ್ರಭಾರಿ ಪಾತ್ರ ವಹಿಸಲಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೋವಾ ಉಸ್ತುವಾರಿ ವಹಿಸಿಕೊಂಡಿದ್ದು, ಕೇಂದ್ರ ಸಚಿವ ಭೂಪೇಂದ್ರ ಯಾದವ್ ಮಣಿಪುರದ ಉಸ್ತುವಾರಿ ಹೊರಲಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

2 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

8 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago