Featured

5 ಲಕ್ಷ ಹೆಕ್ಟೇರ್‌ ಜಮೀನು ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ  ಹಂಚಲಾಗುವುದು : ಕಂದಾಯ ಸಚಿವ – Vishwanews24

5 ಲಕ್ಷ ಹೆಕ್ಟೇರ್‌ ಜಮೀನು ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ  ಹಂಚಲಾಗುವುದು,..

ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್‌ ಭೂಮಿ ಕಂದಾಯ ಇಲಾಖೆಗೆ ಹಸ್ತಾಂತರ..

ಬೆಂಗಳೂರು: ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್‌ ಭೂಮಿ ಹಸ್ತಾಂತರವಾಗಲಿದ್ದು, ಈ ಪೈಕಿ ಸುಮಾರು 5 ಲಕ್ಷ ಹೆಕ್ಟೇರ್‌ ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಹಂಚಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಮೊದಲು ಡೀಮ್ಡ್ ಫಾರೆಸ್ಟ್‌ ಎಂದು ಗುರುತಿಸಿ ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್‌ ಭೂಮಿ ಈಗ ಕಂದಾಯ ಇಲಾಖೆಗೆ ಹಸ್ತಾಂತರ ವಾಗಲಿದೆ ಎಂದು ಹೇಳಿದರು.

ಇಲಾಖೆಯು ತನ್ನ ಅಗತ್ಯಕ್ಕೆ ಬೇಕಾದ ಭೂಮಿ ಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲಿದೆ. ಈ ಮೂಲಕ ಮೈಸೂರು, ಚಾಮರಾಜನಗರ, ಶಿವಮೊಗ್ಗ ಸಹಿತ ರಾಜ್ಯಾದ್ಯಂತ ಇರುವ ಬಗರ್‌ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಗೆ ಮರಳಿ ಬರುವ ಪೈಕಿ ಎಷ್ಟು ಪ್ರಮಾಣದ ಭೂಮಿ ಸರಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸಲಾಗುತ್ತಿದ್ದು, ಆಸ್ಪತ್ರೆ ಸಹಿತ ಸಾರ್ವಜನಿಕ ಸೇವೆಯ ಕಟ್ಟಡಗಳಿಗೆ ಇದು ಬಳಕೆಯಾಗಲಿದೆ ಎಂದರು.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

6 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

6 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

6 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

9 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

1 day ago