ಬೆಂಗಳೂರು: ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್ ಭೂಮಿ ಹಸ್ತಾಂತರವಾಗಲಿದ್ದು, ಈ ಪೈಕಿ ಸುಮಾರು 5 ಲಕ್ಷ ಹೆಕ್ಟೇರ್ ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಹಂಚಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಮೊದಲು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿ ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್ ಭೂಮಿ ಈಗ ಕಂದಾಯ ಇಲಾಖೆಗೆ ಹಸ್ತಾಂತರ ವಾಗಲಿದೆ ಎಂದು ಹೇಳಿದರು.
ಇಲಾಖೆಯು ತನ್ನ ಅಗತ್ಯಕ್ಕೆ ಬೇಕಾದ ಭೂಮಿ ಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲಿದೆ. ಈ ಮೂಲಕ ಮೈಸೂರು, ಚಾಮರಾಜನಗರ, ಶಿವಮೊಗ್ಗ ಸಹಿತ ರಾಜ್ಯಾದ್ಯಂತ ಇರುವ ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆಗೆ ಮರಳಿ ಬರುವ ಪೈಕಿ ಎಷ್ಟು ಪ್ರಮಾಣದ ಭೂಮಿ ಸರಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸಲಾಗುತ್ತಿದ್ದು, ಆಸ್ಪತ್ರೆ ಸಹಿತ ಸಾರ್ವಜನಿಕ ಸೇವೆಯ ಕಟ್ಟಡಗಳಿಗೆ ಇದು ಬಳಕೆಯಾಗಲಿದೆ ಎಂದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…