5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ಸೇರಲು ಅವಕಾಶ : ಮಧು ಬಂಗಾರಪ್ಪ – vishwanews24

Featured, ರಾಜ್ಯ ನ್ಯೂಸ್

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ : 6 ವರ್ಷ ಕಡ್ಡಾಯ ನಿಯಮಕ್ಕೆ ಬ್ರೇಕ್

ಬೆಂಗಳೂರು: 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆ ಮೂಲಕ 6 ವರ್ಷ ಕಡ್ಡಾಯ ನಿಯಮಕ್ಕೆ ಬ್ರೇಕ್ ಹಾಕಿದೆ.

1ನೇ ತರಗತಿ ಸೇರುವ ಮಕ್ಕಳ ವಯೋಮಿತಿ ಸಡಿಲಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಮಲ್ಪೆ : ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ಪ್ರಕರಣ ; ಸ್ಪಷ್ಟನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ – vishwanews24

ಪೋಷಕರು ವಯೋಮಿತಿ ಗೊಂದಲದಲ್ಲಿ ಇದ್ದಾರೆ. ಎರಡು ತಿಂಗಳು ರಿಯಾಯ್ತಿ ಕೊಡಬಹುದು. ದೇಶದಲ್ಲಿ ಈಗಾಗಲೇ 6 ವರ್ಷ ಇದೆ. ಈ ವರ್ಷ ಮಾತ್ರ ವಯಸ್ಸಿನ ಮಿತಿ ಸಡಿಲ ಮಾಡಲಾಗುವುದು. ಮುಂದಿನ ವರ್ಷದಿಂದ 1ನೇ ತರಗತಿಗೆ ಸೇರಲು 6 ವರ್ಷ ನಿಯಮ ಕಡ್ಡಾಯ ಎಂದು ತಿಳಿಸಿದರು.

ಎಸ್‌ಇಪಿ ಅವರಿಂದ ವರದಿ ಕೇಳಿದ್ವಿ. ಅವರು ಮೊದಲು 6 ವರ್ಷ ಅಂತ ಹೇಳಿದ್ರು. ಆಮೇಲೆ ನಮ್ಮ ಇಲಾಖೆ ಅವರ ಜೊತೆ ಮಾತಾಡಿದ್ವಿ. ಎಸ್‌ಇಪಿ ಸೂಚನೆ ಮೇಲೆ 5 ವರ್ಷ 5 ತಿಂಗಳು ಆಗಿದ್ದರೆ ದಾಖಲಾತಿ ಮಾಡಬೇಕು. ಸಮೀಕ್ಷೆಗೆ ತಂತ್ರಜ್ಞಾನ ಬಳಕೆ ಮಾಡಿ ಮತ್ತೆ ಮಾಡಲಿ ಎಂದರು.

ಬೆಂಗಳೂರು : ಮೆಟ್ರೋ ಕಾಮಗಾರಿಗೆ ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ಬೃಹತ್ ವಯಾಡಕ್ಟ್ ಉರುಳಿ ಬಿದ್ದು ಆಟೋ ಚಾಲಕ ಸಾವು – vishwanews24

ಯುಕೆಜಿ ಮುಗಿಸಿರಬೇಕು. 1ನೇ ತರಗತಿಗೆ 5 ವರ್ಷ 5 ತಿಂಗಳು ದಾಖಲಾತಿ ಮಿತಿ ಸಡಿಲಿಕೆ ಮಾಡಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗೊಲ್ಲ ಎಂದು ಸ್ಪಷ್ಟಪಡಿಸಿದರು.

ವಯೋಮಿತಿ ಸಡಿಲ ಮಾಡುವುದಕ್ಕೆ ಎಲ್ಲರೂ ಒತ್ತಡ ಹಾಕಿದ್ದರು. ಮಕ್ಕಳನ್ನ ಮಿಷನ್ ರೀತಿ ಓದಿಸೋಕೆ ಪೋಷಕರು ಮುಂದಾಗಬಾರದು. ಮಕ್ಕಳಿಗೆ ಒತ್ತಡ ಹಾಕುವುದು ಸರಿಯಲ್ಲ. ಒತ್ತಡ ಇಲ್ಲದೆ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು.

Leave a Reply