Featured

5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ಸೇರಲು ಅವಕಾಶ : ಮಧು ಬಂಗಾರಪ್ಪ – vishwanews24

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ : 6 ವರ್ಷ ಕಡ್ಡಾಯ ನಿಯಮಕ್ಕೆ ಬ್ರೇಕ್

ಬೆಂಗಳೂರು: 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆ ಮೂಲಕ 6 ವರ್ಷ ಕಡ್ಡಾಯ ನಿಯಮಕ್ಕೆ ಬ್ರೇಕ್ ಹಾಕಿದೆ.

1ನೇ ತರಗತಿ ಸೇರುವ ಮಕ್ಕಳ ವಯೋಮಿತಿ ಸಡಿಲಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಪೋಷಕರು ವಯೋಮಿತಿ ಗೊಂದಲದಲ್ಲಿ ಇದ್ದಾರೆ. ಎರಡು ತಿಂಗಳು ರಿಯಾಯ್ತಿ ಕೊಡಬಹುದು. ದೇಶದಲ್ಲಿ ಈಗಾಗಲೇ 6 ವರ್ಷ ಇದೆ. ಈ ವರ್ಷ ಮಾತ್ರ ವಯಸ್ಸಿನ ಮಿತಿ ಸಡಿಲ ಮಾಡಲಾಗುವುದು. ಮುಂದಿನ ವರ್ಷದಿಂದ 1ನೇ ತರಗತಿಗೆ ಸೇರಲು 6 ವರ್ಷ ನಿಯಮ ಕಡ್ಡಾಯ ಎಂದು ತಿಳಿಸಿದರು.

ಎಸ್‌ಇಪಿ ಅವರಿಂದ ವರದಿ ಕೇಳಿದ್ವಿ. ಅವರು ಮೊದಲು 6 ವರ್ಷ ಅಂತ ಹೇಳಿದ್ರು. ಆಮೇಲೆ ನಮ್ಮ ಇಲಾಖೆ ಅವರ ಜೊತೆ ಮಾತಾಡಿದ್ವಿ. ಎಸ್‌ಇಪಿ ಸೂಚನೆ ಮೇಲೆ 5 ವರ್ಷ 5 ತಿಂಗಳು ಆಗಿದ್ದರೆ ದಾಖಲಾತಿ ಮಾಡಬೇಕು. ಸಮೀಕ್ಷೆಗೆ ತಂತ್ರಜ್ಞಾನ ಬಳಕೆ ಮಾಡಿ ಮತ್ತೆ ಮಾಡಲಿ ಎಂದರು.

ಯುಕೆಜಿ ಮುಗಿಸಿರಬೇಕು. 1ನೇ ತರಗತಿಗೆ 5 ವರ್ಷ 5 ತಿಂಗಳು ದಾಖಲಾತಿ ಮಿತಿ ಸಡಿಲಿಕೆ ಮಾಡಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗೊಲ್ಲ ಎಂದು ಸ್ಪಷ್ಟಪಡಿಸಿದರು.

ವಯೋಮಿತಿ ಸಡಿಲ ಮಾಡುವುದಕ್ಕೆ ಎಲ್ಲರೂ ಒತ್ತಡ ಹಾಕಿದ್ದರು. ಮಕ್ಕಳನ್ನ ಮಿಷನ್ ರೀತಿ ಓದಿಸೋಕೆ ಪೋಷಕರು ಮುಂದಾಗಬಾರದು. ಮಕ್ಕಳಿಗೆ ಒತ್ತಡ ಹಾಕುವುದು ಸರಿಯಲ್ಲ. ಒತ್ತಡ ಇಲ್ಲದೆ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

8 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago