Featured

5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ಸೇರಲು ಅವಕಾಶ : ಮಧು ಬಂಗಾರಪ್ಪ – vishwanews24

ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ : 6 ವರ್ಷ ಕಡ್ಡಾಯ ನಿಯಮಕ್ಕೆ ಬ್ರೇಕ್

ಬೆಂಗಳೂರು: 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆ ಮೂಲಕ 6 ವರ್ಷ ಕಡ್ಡಾಯ ನಿಯಮಕ್ಕೆ ಬ್ರೇಕ್ ಹಾಕಿದೆ.

1ನೇ ತರಗತಿ ಸೇರುವ ಮಕ್ಕಳ ವಯೋಮಿತಿ ಸಡಿಲಿಕೆ ಸಂಬಂಧ ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಪೋಷಕರು ವಯೋಮಿತಿ ಗೊಂದಲದಲ್ಲಿ ಇದ್ದಾರೆ. ಎರಡು ತಿಂಗಳು ರಿಯಾಯ್ತಿ ಕೊಡಬಹುದು. ದೇಶದಲ್ಲಿ ಈಗಾಗಲೇ 6 ವರ್ಷ ಇದೆ. ಈ ವರ್ಷ ಮಾತ್ರ ವಯಸ್ಸಿನ ಮಿತಿ ಸಡಿಲ ಮಾಡಲಾಗುವುದು. ಮುಂದಿನ ವರ್ಷದಿಂದ 1ನೇ ತರಗತಿಗೆ ಸೇರಲು 6 ವರ್ಷ ನಿಯಮ ಕಡ್ಡಾಯ ಎಂದು ತಿಳಿಸಿದರು.

ಎಸ್‌ಇಪಿ ಅವರಿಂದ ವರದಿ ಕೇಳಿದ್ವಿ. ಅವರು ಮೊದಲು 6 ವರ್ಷ ಅಂತ ಹೇಳಿದ್ರು. ಆಮೇಲೆ ನಮ್ಮ ಇಲಾಖೆ ಅವರ ಜೊತೆ ಮಾತಾಡಿದ್ವಿ. ಎಸ್‌ಇಪಿ ಸೂಚನೆ ಮೇಲೆ 5 ವರ್ಷ 5 ತಿಂಗಳು ಆಗಿದ್ದರೆ ದಾಖಲಾತಿ ಮಾಡಬೇಕು. ಸಮೀಕ್ಷೆಗೆ ತಂತ್ರಜ್ಞಾನ ಬಳಕೆ ಮಾಡಿ ಮತ್ತೆ ಮಾಡಲಿ ಎಂದರು.

ಯುಕೆಜಿ ಮುಗಿಸಿರಬೇಕು. 1ನೇ ತರಗತಿಗೆ 5 ವರ್ಷ 5 ತಿಂಗಳು ದಾಖಲಾತಿ ಮಿತಿ ಸಡಿಲಿಕೆ ಮಾಡಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗೊಲ್ಲ ಎಂದು ಸ್ಪಷ್ಟಪಡಿಸಿದರು.

ವಯೋಮಿತಿ ಸಡಿಲ ಮಾಡುವುದಕ್ಕೆ ಎಲ್ಲರೂ ಒತ್ತಡ ಹಾಕಿದ್ದರು. ಮಕ್ಕಳನ್ನ ಮಿಷನ್ ರೀತಿ ಓದಿಸೋಕೆ ಪೋಷಕರು ಮುಂದಾಗಬಾರದು. ಮಕ್ಕಳಿಗೆ ಒತ್ತಡ ಹಾಕುವುದು ಸರಿಯಲ್ಲ. ಒತ್ತಡ ಇಲ್ಲದೆ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago