Featured

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಮಹತ್ವದ ಆದೇಶ – Vishwanews24

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು11 ನೇ ತರಗತಿಯ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಪ್ರಸ್ತುತ ತೀರ್ಪು ನೀಡಿದೆ.

ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಹೈಕೋರ್ಟ್‌ನ ಈ ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೂ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾದಂತಾಗಿದೆ.

ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ಎರಡು ಸುತ್ತೋಲೆಗಳನ್ನು ಹೊರಡಿಸಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿತ್ತು.ಇದನ್ನು ಪ್ರಶ್ನಿಸಿದ್ದ ಅರ್ಜಿದಾರರ‌ ಸಂಘ, ಶಿಕ್ಷಣ ಇಲಾಖೆ ಸುತ್ತೋಲೆ ಕೇವಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಇದು ಪಠ್ಯಕ್ರಮದ ಭಾಗವಲ್ಲ. ಆದರೆ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರ ಹೇಳುತ್ತಿದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸಲು ಕಷ್ಟ .ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಈ ವೇಳೆ ಸರ್ಕಾರ ಪರ ವಕೀಲರು, ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗವೇ ಆಗಿದೆ. ಸಾಮಾನ್ಯ ಪಠ್ಯಕ್ರಮದಿಂದಲೇ ಕಲಿಕಾ ಚೇತರಿಗೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ. ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮದಿಂದ ಹೊರತಾದ ಪ್ರಶ್ನೆಗಳಿಲ್ಲ. ಹಾಗಾಗಿ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಅದರಂತೆ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಮರ್ಥಿಸಿಕೊಂಡರು.ಆದರೆ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

3 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

3 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

4 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

4 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

4 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

6 hours ago