Featured

50 ವರ್ಷ ರಾಜಕಾರಣ ಮಾಡಿದವರು ಆರ್​ಎಸ್​ಎಸ್​ ಶಿಬಿರದಲ್ಲಿ ಭಾಷಣ ಮಾಡಿದ್ದು ಯಕ್ಷ ಪ್ರಶ್ನೆ ! : ಸಿದ್ದರಾಮಯ್ಯ -Vishwanews24

50 ವರ್ಷ ರಾಜಕಾರಣ ಮಾಡಿದವರು ಆರ್​ಎಸ್​ಎಸ್​ ಶಿಬಿರದಲ್ಲಿ ಭಾಷಣ ಮಾಡಿದ್ದು ಯಕ್ಷ ಪ್ರಶ್ನೆ ! : ಸಿದ್ದರಾಮಯ್ಯ -Vishwanews24

ಬೆಂಗಳೂರು: ಪ್ರಣಬ್ ಮುಖರ್ಜಿ ಸುಧೀರ್ಘ ರಾಜಕೀಯ ಜೀವನ ನಡೆಸಿದವರು. ದೇಶ ಕಂಡ ಕೆಲವೇ ಬುದ್ದಿಜೀವಿಗಳಲ್ಲಿ ಅವರು ಕೂಡ ಒಬ್ಬರು. ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ಆಗಿದ್ದವರು. ಸಮಸ್ಯೆ ಎದುರಾದಾಗ ಅವರು ಜವಾಬ್ದಾರಿ ಹೊತ್ತುಕೊಂಡು ತಮ್ಮ ಬುದ್ಧಿವಂತಿಕೆಯಿಂದ ನಿವಾರಿಸುತ್ತಿದ್ದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ ಸೇರಿದ ಮೇಲೆ ಪ್ರಣಬ್ ಅವರನ್ನು ಭೇಟಿ ಮಾಡಿದ್ದೆ. ಆಗ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದರು. ನಂತರ ಸಿಎಂ ಆದ ಮೇಲೆ ಅವರನ್ನು ನಿರಂತರ ಭೇಟಿ ಮಾಡುತ್ತಿದ್ದೆ.  ಇದೇ ಕೆಪಿಸಿಸಿ ಕಚೇರಿಗೆ ಶಾಸಕರ ಮತ ಕೇಳಲು ಬಂದಿದ್ದರು ಎಂದು ನೆನಪಿಸಿಕೊಂಡರು.

ಅವರು ರಾಜ್ಯಕ್ಕೆ ನಾಲ್ಕೈದು ಬಾರಿ ಬಂದಿದ್ದರು. ಕೆಲವೊಂದು ಯೋಜನೆಗೂ ಸಹಿ ಹಾಕಿಕೊಟ್ಟಿದ್ದರು. ಪ್ರಗತಿಪರ ವಿಚಾರ ಹೇಳಿದಾಗ ಪರವಾಗಿ ನಿಲ್ಲುತ್ತಿದ್ದರು. ಅವರಿಗೆ ಹಲವು ಪ್ರಶಸ್ತಿಗಳು ಹರಿದು ಬಂದಿದ್ದವು. ಜಗತ್ತಿನ ಐವರು ಹಣಕಾಸು ಸಚಿವರಲ್ಲಿ ಇವರು ಒಬ್ಬರು. ರಾಜೀವ್ ಪ್ರಧಾನಿಯಾಗಿದ್ದಾಗ ಪಕ್ಷ ತೊರೆದು, ರಾಷ್ಟ್ರೀಯ ಸಮಾಜವಾದಿ ಕಾಂಗ್ರೆಸ್ ಪಾರ್ಟಿ ಕಟ್ಟಿದ್ದರು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಪ್ರಣಬ್ ಹಣಕಾಸು ಸಚಿವರಾಗಿದ್ದರು.  ಇದೇ ನೋಡಿ ವಿಪರ್ಯಾಸ. ಅವರು ಆರ್ ಎಸ್ ಎಸ್ ಗೆ ಹೋಗಿದ್ದೇ ಯಕ್ಷಪ್ರಶ್ನೆ. ಆರ್ ಎಸ್ ಎಸ್ ಇದೆಯಲ್ಲ ಅದು ಕೋಮುವಾದಿ ಸಂಘಟನೆ. 50 ವರ್ಷ ರಾಜಕಾರಣ ಮಾಡಿದವರು. ಅಲ್ಲಿಗೆ ಹೋಗಿ ಭಾಷಣ ಮಾಡುತ್ತಾರೆ ಅಂದರೆ ಹೇಗೆ ? ಎಂದು ಸಿದ್ದರಾಮಯ್ಯ ಆಶ್ಚರ್ಯ ವ್ಯಕ್ತಪಡಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago