ನವದೆಹಲಿ : ಸೂಪರ್ ಸ್ಟಾರ್ ರಜನಿಕಾಂತ್ 51 ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಜಾವ್ಡೇಕರ್, 2019ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಗೊಂಡಿದ್ದಾರೆ. ಭಾರತದ ಸಿನೆಮಾ ರಂಗದಲ್ಲಿ ರಜನಿಕಾಂತ್ ಮೇರು ನಟ. ನಟರಾಗಿ, ನಿರ್ಮಾಪಕರಾಗಿ, ಚಿತ್ರ ಕಥೆಗಾರನಾಗಿ ಭಾರತೀಯ ಸಿನೆಮಾ ರಂಗಕ್ಕೆ ಅವರು ನೀಡಿದ ಕೊಡುಗೆ ಅನನ್ಯ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಹರ್ಷ ವ್ಯಕ್ತ ಪಡಿಸಿದ ನಟ ಹಾಗೂ ನಿರ್ದೇಶಕ ಕಮಲಾ ಹಾಸನ್, ಸೂಪರ್ ಸ್ಟಾರ್ ಹಾಗೂ ನನ್ನ ಆತ್ಮೀಯ ಗೆಳೆಯ ರಜನಿಕಾಂತ್ ಈ ಪ್ರಶಸ್ತಿಗೆ ಶೇಕಡಾ ನೂರಕ್ಕೆ ನೂರು ಅರ್ಹ ವ್ಯಕ್ತಿ. ಅವರು ಪರದೆ ಮೇಲೆ ಪ್ರೇಕ್ಷಕರನ್ನು ಇಷ್ಟು ಪ್ರಮಾಣದಲ್ಲಿ ಗೆಲ್ಲಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಮ್ಮ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
ಭಾರತೀಯ ಸಿನೆಮಾ ರಂಗದ ಪಿತಾಮಹ ಎಂದು ಕರೆಯಲ್ಪಡುವ ದಾದಾ ಸಾಹೇಬ್, 1913ರಲ್ಲಿ ನಟರಾಗಿ ಭಾರತೀಯ ಸಿನೆಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರ ಹೆಸರಿನಲ್ಲಿ ಕೊಡಮಾಡುವ ಈ ಪ್ರಶಸ್ತಿ ಭಾರತೀಯ ಸಿನೆಮಾ ರಂಗದ ಶ್ರೇಷ್ಟ ಪ್ರಶಸ್ತಿ ಎಂದು ಪರಿಗಣಿಸಲ್ಪಟ್ಟಿದೆ. ಸಿನೆಮಾರಂಗದ ಶ್ರೇಷ್ಠ ಮಾನ್ಯರಿಗೆ, ಭಾರತೀಯ ಸಿನಿ ರಂಗಕ್ಕೆ ನೀಡಿದ ಅಪಾರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ಸ್ವರ್ಣ ಕಮಲ ಪದಕ ಹಾಗೂ ಹತ್ತು ಲಕ್ಷ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.
402 ಸಿವಿಲ್ ಪಿ.ಎಸ್.ಐ ನೇಮಕಕ್ಕೆ ಅಧಿಸೂಚನೆ ಪ್ರಕಟ-Vishwanews24
ಈ ಪ್ರಶಸ್ತಿಯನ್ನು ಕಳೆದ ವರ್ಷ ಘೋಷಿಸಬೇಕಾಗಿತ್ತು. ಕೋವಿಡ್ ಸಾಂಕ್ರಾಮಿಕ ಸೋಂಕು ಹಾಗೂ ಲಾಕ್ಡೌನ್ ನ ಕಾರಣದಿಂದಾಗಿ ವಿಳಂಬವಾಗಿತ್ತು. ಗಾಯಕರಾದ ಆಶಾ ಭೋಸ್ಲೆ ಮತ್ತು ಶಂಕರ್ ಮಹಾದೇವನ್, ನಟರಾದ ಮೋಹನ್ ಲಾಲ್ ಮತ್ತು ಬಿಸ್ವಾಜೀತ್, ಮತ್ತು ಚಲನಚಿತ್ರ ನಿರ್ಮಾಪಕ ಸುಭಾಷ್ ಘೈ ಇದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ 2019 ನೇ ಸಾಲಿನ ಆಯ್ಕೆ ಸಮಿತಿಯು ರಜನಿಕಾಂತ್ ಅವರನ್ನು ಸಿನೆಮಾ ರಂಗಕ್ಕೆ ನೀಡಿದ ಅಪಾರವಾದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…