ನವದೆಹಲಿ : ಸೂಪರ್ ಸ್ಟಾರ್ ರಜನಿಕಾಂತ್ 51 ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಜಾವ್ಡೇಕರ್, 2019ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಗೊಂಡಿದ್ದಾರೆ. ಭಾರತದ ಸಿನೆಮಾ ರಂಗದಲ್ಲಿ ರಜನಿಕಾಂತ್ ಮೇರು ನಟ. ನಟರಾಗಿ, ನಿರ್ಮಾಪಕರಾಗಿ, ಚಿತ್ರ ಕಥೆಗಾರನಾಗಿ ಭಾರತೀಯ ಸಿನೆಮಾ ರಂಗಕ್ಕೆ ಅವರು ನೀಡಿದ ಕೊಡುಗೆ ಅನನ್ಯ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಹರ್ಷ ವ್ಯಕ್ತ ಪಡಿಸಿದ ನಟ ಹಾಗೂ ನಿರ್ದೇಶಕ ಕಮಲಾ ಹಾಸನ್, ಸೂಪರ್ ಸ್ಟಾರ್ ಹಾಗೂ ನನ್ನ ಆತ್ಮೀಯ ಗೆಳೆಯ ರಜನಿಕಾಂತ್ ಈ ಪ್ರಶಸ್ತಿಗೆ ಶೇಕಡಾ ನೂರಕ್ಕೆ ನೂರು ಅರ್ಹ ವ್ಯಕ್ತಿ. ಅವರು ಪರದೆ ಮೇಲೆ ಪ್ರೇಕ್ಷಕರನ್ನು ಇಷ್ಟು ಪ್ರಮಾಣದಲ್ಲಿ ಗೆಲ್ಲಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಮ್ಮ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
ಭಾರತೀಯ ಸಿನೆಮಾ ರಂಗದ ಪಿತಾಮಹ ಎಂದು ಕರೆಯಲ್ಪಡುವ ದಾದಾ ಸಾಹೇಬ್, 1913ರಲ್ಲಿ ನಟರಾಗಿ ಭಾರತೀಯ ಸಿನೆಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರ ಹೆಸರಿನಲ್ಲಿ ಕೊಡಮಾಡುವ ಈ ಪ್ರಶಸ್ತಿ ಭಾರತೀಯ ಸಿನೆಮಾ ರಂಗದ ಶ್ರೇಷ್ಟ ಪ್ರಶಸ್ತಿ ಎಂದು ಪರಿಗಣಿಸಲ್ಪಟ್ಟಿದೆ. ಸಿನೆಮಾರಂಗದ ಶ್ರೇಷ್ಠ ಮಾನ್ಯರಿಗೆ, ಭಾರತೀಯ ಸಿನಿ ರಂಗಕ್ಕೆ ನೀಡಿದ ಅಪಾರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ಸ್ವರ್ಣ ಕಮಲ ಪದಕ ಹಾಗೂ ಹತ್ತು ಲಕ್ಷ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.
402 ಸಿವಿಲ್ ಪಿ.ಎಸ್.ಐ ನೇಮಕಕ್ಕೆ ಅಧಿಸೂಚನೆ ಪ್ರಕಟ-Vishwanews24
ಈ ಪ್ರಶಸ್ತಿಯನ್ನು ಕಳೆದ ವರ್ಷ ಘೋಷಿಸಬೇಕಾಗಿತ್ತು. ಕೋವಿಡ್ ಸಾಂಕ್ರಾಮಿಕ ಸೋಂಕು ಹಾಗೂ ಲಾಕ್ಡೌನ್ ನ ಕಾರಣದಿಂದಾಗಿ ವಿಳಂಬವಾಗಿತ್ತು. ಗಾಯಕರಾದ ಆಶಾ ಭೋಸ್ಲೆ ಮತ್ತು ಶಂಕರ್ ಮಹಾದೇವನ್, ನಟರಾದ ಮೋಹನ್ ಲಾಲ್ ಮತ್ತು ಬಿಸ್ವಾಜೀತ್, ಮತ್ತು ಚಲನಚಿತ್ರ ನಿರ್ಮಾಪಕ ಸುಭಾಷ್ ಘೈ ಇದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ 2019 ನೇ ಸಾಲಿನ ಆಯ್ಕೆ ಸಮಿತಿಯು ರಜನಿಕಾಂತ್ ಅವರನ್ನು ಸಿನೆಮಾ ರಂಗಕ್ಕೆ ನೀಡಿದ ಅಪಾರವಾದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…