ಉಡುಪಿ: ಉಡುಪಿ ಜಿಲ್ಲೆಯ ಉದ್ಯಾವರದ ಪಿತ್ರೋಡಿಯ 5 ವಿಶ್ವ ದಾಖಲೆಗಳ ಸರದಾರಿಣಿ ತನುಶ್ರೀ ಪಿತ್ರೋಡಿ ಇನ್ನೊಂದು ದಾಖಲೆಗೆ ಹೊರಟು ನಿಂತಿದ್ದಾರೆ. ಇದೇ ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ದಾಖಲೆಯೊಂದನ್ನು ಮಾಡಲು ಹೊರಟಿದ್ದಾರೆ.
ಸ್ವರ್ಣೆಗೆ ಆರತಿ ಬೆಳಗಿದ ಪೇಜಾವರ ಶ್ರೀಗಳು ಈ ಬಾರಿ ತನುಶ್ರೀ ಮೋಸ್ಟ್ ಬ್ಯಾಕ್ವರ್ಡ್ಸ್ ಬಾಡಿ ಸ್ಕಿಪ್ಪಿಂಗ್ ಇನ್ ಒನ್ ಮಿನಿಟ್ ದಾಖಲೆಗಾಗಿ ಪ್ರಯತ್ನಿಸುತ್ತಿದ್ದಾಳೆ. ಈ ದಾಖಲೆಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿರುವ 11 ವರ್ಷದ ತನುಶ್ರೀ ವಿಶ್ವದಾಖಲೆ ಮಾಡುತ್ತೇನೆ ಎಂಬ ಅಚಲ ವಿಶ್ವಾಸದಲ್ಲಿದ್ದಾಳೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24
ಉಡುಪಿ ಜಿಲ್ಲೆಯ ಪಿತ್ರೋಡಿಯ ತುನುಶ್ರೀ ಈಗಾಗಲೇ ನಾಲ್ಕು ವಿಶ್ವ ದಾಖಲೆಗಳನ್ನು ಮಾಡಿದ್ದಾಳೆ. ಫೆಬ್ರವರಿ 6ರಂದು ಐದನೇಯ ವಿಶ್ವದಾಖಲೆ ಮಾಡಲು ಹೊರಟಿದ್ದಾಳೆ. ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ತನುಶ್ರೀ ಪಿತ್ರೋಡಿ ನೂತನ ದಾಖಲೆಯೊಂದನ್ನು ಮಾಡುತ್ತಿದ್ದಾಳೆ.
ಧನುರಾಸನ ಹಾಕಿ ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ (62) ಉರುಳಿದ್ದು ತನುಶ್ರೀಯ ಒಂದು ದಾಖಲೆ. 1 ನಿಮಿಷ 40 ಸೆಕೆಂಡ್ಗಳಲ್ಲಿ ಅತಿ ವೇಗವಾಗಿ 100 ಬಾರಿ ಉರುಳಿ ಮತ್ತೊಂದು ದಾಖಲೆ ಮಾಡಿದ್ದಾಳೆ ಈ ಪೋರಿ.
ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ -Vishwanews24
2017ರಲ್ಲಿ ನಿರಾಲಂಬ ಪೂರ್ಣ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸೇರಿದ್ದಳು. ತುನುಶ್ರೀ ಹೆಸರಿನಲ್ಲಿ ಈಗಾಗಲೇ ನಾಲ್ಕು ದಾಖಲೆಗಳಿವೆ.
ನಾಟ್ಯದಲ್ಲೂ ಅಸಾಧಾರಣ ಸಾಧನೆ ಮಾಡಿರುವ ತನುಶ್ರೀ ಯೋಗರತ್ನ ಎಂಬ ಬಿರುದಾಂಕಿತೆ. ತನುಶ್ರೀಯ ಸಾಧನೆಗಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೂಡ ಮುಡಿಗೇರಿದೆ.
ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…