ಚಿಕ್ಕಮಗಳೂರು : 6 ರಿಂದ 12 ನೇ ತರಗತಿಯವರೆಗೆ ಸಂಪೂರ್ಣ ಶಾಲಾರಂಭಕ್ಕೆ ಈಗಾಗಲೇ ಮೌಖಿಕವಾಗಿ ಸೂಚನೆ ನೀಡಿದ್ದು, ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಲವಂತ ಮಾಡುವಂತಿಲ್ಲ. ದಸರಾ ಹಬ್ಬದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದರು.
ಇನ್ನು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದು ಶಾಲೆಗಳಿಗೆ ತೊಂದರೆಯಾಗುತ್ತದೆ ಎಂದು ಅನಿಸುವುದಿಲ್ಲ ಎಂದಿದ್ದಾರೆ..
ದಸರಾ ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ಈ ವಾರದಲ್ಲಿ ಸಿಎಂ ಹಾಗೂ ಕೊರೊನಾ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡಿದ್ದು, 3,4,5 ನೇ ತರಗತಿ ಆರಂಭಿಸುವುದಕ್ಕಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ತಿಳಿಸಿದರು.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…