ಹೈದರಾಬಾದ್ : ಇತ್ತೀಚಿಗೆ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಆರೋಪಿ ಪಲ್ಲಂಕೊಂಡ ರಾಜು ಇಂದು ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ.
ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಹೊತ್ತಿದ್ದ ಆರೋಪಿ ರಾಜು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೂಲಗಳು ಮಾಹಿತಿ ನೀಡಿದ್ದು, ಆತನ ಕೈ ಮೇಲಿನ ಹಚ್ಚೆಯ ಆಧಾರದ ಮೇಲೆ ರಾಜುವನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 9 ರ ಗುರುವಾರದಂದು ಹೈದರಾಬಾದ್ನ ಸೈದಾಬಾದ್ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯಾಗಿದ್ದ ಪಲಕೊಂಡ ರಾಜು ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಗುರುವಾರ ಸಂಜೆಯಿಂದ ಕಾಣೆಯಾಗಿದ್ದ ಬಾಲಕಿಯನ್ನು, ಪೋಷಕರು ರಾತ್ರಿವರೆಗೂ ಹುಡುಕಾಡಿದರೂ ಪತ್ತೆಯಾಗದೆ ಇದ್ದದ್ದರಿಂದ ಸೈದಾಬಾದ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಪೊಲೀಸರಿಗೆ ದೂರು ನೀಡಿದ ನಂತರ, ನೆರೆ ಮನೆಯ ವ್ಯಕ್ತಿ ಕೂಡಾ ಕಾಣೆಯಾಗಿದ್ದು ಅನುಮಾನ ಬಂದಿದ್ದ ರಿಂದ, ಪೊಲೀಸರೊಂದಿಗೆ ಹೋಗಿ ಅಲ್ಲಿ ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಬೆಡ್ಶೀಟ್ನಲ್ಲಿ ಸುತ್ತಿರುವುದನ್ನು ಕಂಡುಬಂದಿದೆ. ಒಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ನಡೆದ ಶವಪರೀಕ್ಷೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಖಚಿಪಟ್ಟಿದೆ. ಜೊತೆಗೆ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪರೀಕ್ಷೆಯಲ್ಲಿ ತಿಳಿದುಬಂದಿದೆ. ಈ ಘಟನೆಯ ನಂತರ, ಭಾರೀ ಪ್ರತಿಭಟನೆಗಳು ಭುಗಿಲೆದ್ದು, ಕಲ್ಲು ತೂರಾಟವೂ ನಡೆದಿತ್ತು.
ಈ ಮಧ್ಯೆ, ತೆಲಂಗಾಣ ಕಾರ್ಮಿಕ ಸಚಿವ ಚಿ ಮಲ್ಲಾರೆಡ್ಡಿ ಮಂಗಳವಾರ ಆರೋಪಿಯನ್ನು “ಎನ್ ಕೌಂಟರ್” ಮಾಡುವಂತೆ ಒತ್ತಾಯಿಸಿದ್ದಾರೆ ಹೈದರಾಬಾದ್ ಪೊಲೀಸರು, ಆರೋಪಿ ಚಿತ್ರವನ್ನು ಬಿಡುಗಡೆ ಮಾಡಿ, ಆತನ ಬಗ್ಗೆ ಮಾಹಿತಿ ನೀಡಿದರೆ 10 ಲಕ್ಷ ರೂಪಾಯಿ ಬಹುಮಾನ ಕೂಡ ಘೋಷಿಸಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]