ಬೆಂಗಳೂರು: 6 ವರ್ಷದ ಮೊಮ್ಮಗಳ ಮೇಲೆ ಆಕೆಯ ತಾತನೇ ಅತ್ಯಾಚಾರವೆಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಬಗ್ಗೆ ಬನ್ನೇರುಘಟ್ಟ ರಸ್ತೆಯ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೋಕ್ಸೋ ಕೇಸ್ (POCSO Case) ದಾಖಲಾಗಿದೆ. ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಹುಳಿಮಾವು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿಯ ತಂದೆ ರಂಜಿತ್ ಕುಮಾರ್ನನ್ನು (35) ಬಂಧಿಸಲಾಗಿದೆ. ಆರೋಪಿಗಳು ಮೂಲತಃ ತಮಿಳುನಾಡು ಮೂಲದವರಾಗಿದ್ದು, ಪ್ರಸ್ತುತ ಹುಳಿಮಾವು ಸಮೀಪ ವೇಣುಗೋಪಾಲ್ ನಗರದ ನಿವಾಸಿಯಾಗಿದ್ದರು. ರಂಜಿತ್ ಕುಮಾರ್ ತಂದೆ ಚಕ್ರವರ್ತಿ (60), ಅತ್ತೆ ವಿಜಯಮ್ಮ (50) ಹಾಗೂ ಇಬ್ಬರು ಸಹೋದರರು ತಲೆಮರೆಸಿಕೊಂಡಿದ್ದಾರೆ.
ತಂದೆ ರಂಜಿತ್ ಕುಮಾರ್ ಅಜ್ಜಿ, ಚಿಕ್ಕಂಪ್ಪದಿರು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದ ಎನ್ನಲಾಗಿದೆ. ತಾಯಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಯಾರಿಗೂ ಹೇಳಿದಂತೆ ತಾಯಿಯ ಬಳಿ ತಂದೆ, ಅತ್ತೆ, ಮಾವ ಹಾಗೂ ಚಿಕ್ಕಪ್ಪಂದಿರು ಆಮಿಷವೊಡ್ಡಿದ್ದಾರೆ. ಮನೆಯನ್ನು ಮೊಮ್ಮಗಳ ಹೆಸರಿಗೆ ಬರೆಯುತ್ತೇವೆ, ಚಿನ್ನದ ಒಡವೆ ಕೊಡಿಸುತ್ತೇವೆ, ವಿಷಯ ಯಾರಿಗೂ ಗೊತ್ತಾಗಬಾರದು ಎಂದು ಧಮ್ಕಿ ಕೂಡ ಹಾಕಿದ್ದಾರೆ. ಬಳಿಕ ತಾಯಿ ಕೆಲಸಕ್ಕೆ ಹೊರಡುತ್ತೇನೆ ಎಂದು ಸಬೂಬು ಹೇಳಿ ಮನೆಯಿಂದ ಆಚೆಗೆ ಬಂದು ಅಕ್ಕಪಕ್ಕದವರ ಸಹಾಯ ಪಡೆದು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಹುಳಿಮಾವು ಪೊಲೀಸ್ ಠಾಣೆಗೆ ಬಂದು ಘಟನೆಯ ಬಗ್ಗೆ ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಅತ್ಯಾಚಾರ ಆರೋಪಿ ಚಕ್ರವರ್ತಿ, ಅತ್ತೆ ವಿಜಯಮ್ಮ ಹಾಗೂ ಇಬ್ಬರು ಸಹೋದರರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಂತ್ರಸ್ತ ಬಾಲಕಿ ವಾಣಿವಿಲಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…