6/1/2020.ರಂದು ವೈಕುಂಠ ಏಕಾದಶಿ ಹಿನ್ನೆಲೆಯ ಮಹತ್ವ ಉಪವಾಸದ ವೈಜ್ಞಾನಿಕ ಸತ್ಯ: ಗಣಪತಿ ಭಟ್ 8088827292

6/1/2020.ರಂದು ವೈಕುಂಠ ಏಕಾದಶಿ
**********************************

ವೈಕುಂಠ ಏಕಾದಶಿ ಹಿನ್ನೆಲೆಯ ಮಹತ್ವ
ಉಪವಾಸದ ವೈಜ್ಞಾನಿಕ ಸತ್ಯ….!

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ.
ಒಂದು “ವೈಕುಂಠ”,
ಎರಡನೆಯದು ಏಕಾದಶಿ,
ಮೊದಲು ಇವುಗಳ ಸ್ಥೂಲ ಅರ್ಥ :
“ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರಿದೆ ಎಂದು ತಿಳಿದುಬರುತ್ತದೆ, ಕಾರಣ ಒಂದು ಮನ್ವಂತರದಲ್ಲಿ ವಿಷ್ಣುವು ವಿಕುಂಠೆಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತು ಎಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.

ಇನ್ನು “ಏಕಾದಶಿ” ಎಂದರೆ ಚಾಂದ್ರಮಾನದ ಹನ್ನೊಂದನೆಯ ತಿಥಿ ಎಂದೂ ಸ್ಥೂಲವಾಗಿ ಹೇಳಬಹುದು.
“ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು.
ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು.

ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ಇದರಿಂದ ಏಕಕಾಲಕ್ಕೆ ದೇಹಕ್ಕೆ ವಿಶ್ರಾಂತಿ, ಮನಸ್ಸಿಗೆ ಭಗವನ್ನಾಮ ಸ್ಮರಣೆಯಿಂದ ಶಾಂತಿ ದೊರೆಯುತ್ತದೆ. ಹೀಗೆ ಎಡಬಿಡದೆ ಏಕಾದಶಿವ್ರತ ಮಾಡುವುದರಿಂದ ದೇಹದ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು. ಮಹಾಕವಿ ಕಾಳಿದಾಸ ಹೇಳಿರುವಂತೆ : “ಶರೀರಮಾಧ್ಯಂ ಖಲು ಧರ್ಮಸಾಧನಂ”, ಧರ್ಮ ಸಂಪಾದನೆಗೆ, ಸ್ವಸ್ಥ್ಯ ಶರೀರ ಅತ್ಯಗತ್ಯ.

ವೈಕುಂಠ ಏಕಾದಶಿಯ ಬಗ್ಗೆ ಕಥೆ ಇಂತಿದೆ :

ಭಾಗವತೋತ್ತಮನಾದ ನಂದಗೋಪನು ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದನು.

ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿನ ಝಾವಕ್ಕೆ ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ.
ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು.

ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ಧಿ ಮುಟ್ಟಿಸಿದರು.

ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು.

ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ. ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು.

ನಂದಗೋಪನಿಗೆ ಪರಮಾನಂದವಾಯಿತು. ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜರೂಫ ಅರಿಯಲಾರೆವು ಎಂದು ಪರಿತಪಿಸಿದರು.

ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಅದರಂತೆ ಅವರೆಲ್ಲಾ ಮಾಡಲಾಗಿ ಅವರ ಕಣ್ಣಿಗೆ ವೈಕುಂಠ ಕಾಣಿಸಿತು, ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂದು ಊಹಿಸಬಹುದು.

ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ.
ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು.
ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ.

ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು. ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ.

ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ..

ಸರ್ವಜನ ಸುಖಿನೋಭವಂತು ಕೃಷ್ಣಾರ್ಪಣಮಸ್ತು

ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ ದೈವಶಕ್ತಿ ಜ್ಯೋತಿಷ್ಯರು.ಶ್ರೀ ಗಣಪತಿ ಭಟ್ ಗುರೂಜಿ, ಮೊ: 8088827292 ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ ಹೀನಾಯ ತೊಂದರೆ, ವಶೀಕರಣ, ಜೂಜಾಟದಲ್ಲಿ ಸಮಸ್ಯೆ, ಉದ್ಯೋಗ, ವಿದ್ಯಾಭ್ಯಾಸ, ವ್ಯಾಪಾರದಲ್ಲಿ ಅಭಿವೃದ್ಧಿ, ಗ್ರಹಗಳ ಗೋಚಾರ ಫಲ, ವಾಸ್ತು ದೋಷ, ಶಕುನ ದೋಷ, ದಾಟಿದ ದೋಷ, ಅನಾರೋಗ್ಯ ತೊಂದರೆ, ಇನ್ನೂ ನಿಮ್ಮ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಕೊಳ್ಳೇಗಾಲ ಮತ್ತು ಕೇರಳದ ಗುಪ್ತ ಪೂಜಾ ಶಕ್ತಿಯಿಂದ ಕೆಲವೇ ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು ಇಂದೇ ಸಂಪರ್ಕಿಸಿ ಮೊ:8088827292

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago