60 ವರ್ಷಗಳ ಕಾಲ ಏನೂ ಮಾಡಲಾಗದಿದ್ದವರು ಈಗ ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದಾರೆ : ಅಮಿತ್ ಶಾ -Vishwanews24

ಗಾಂಧಿನಗರ: ಉದ್ಯೋಗ ಮತ್ತು ಆರ್ಥಿಕ ರಂಗಗಳ ಬಗ್ಗೆ ಋಣಾತ್ಮಕತೆಯನ್ನೇ ಹರಡುತ್ತಿರುವ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ವಿರುದ್ಧ ಕಿಡಿ ಕಾರಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 60 ವರ್ಷಗಳ ಕಾಲ ಏನೂ ಮಾಡಲಾಗದಿದ್ದವರು ಐದಾರು ವರ್ಷಗಳ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದಾರೆ ಎಂದು ಕುಟುಕಿದರು.

ಭಾರತೀಯ ಕೌಶಲ್ಯ ಸಂಸ್ಥೆಗೆ (ಐಐಎಸ್) ಶಿಲಾನ್ಯಾಸ ಏರ್ಪಡಿಸಿದ ಬಳಿಕ ಮಾತನಾಡಿದ ಅಮಿತ್ ಶಾ, ದೇಶವು 5 ಟ್ರಿಲಿಯನ್ ಆರ್ಥಿಕತೆಯ ಗುರಿಯನ್ನು ತಲುಪಲು ಸಮರ್ಥವಾಗಿದೆ ಮತ್ತು ಯುವ ಜನರು ಉದ್ಯಮ ಸ್ಥಾಪನೆಯತ್ತ ಒಲವು ತೋರಿದರೆ ಗುರಿ ಸಾಧನೆಯಲ್ಲಿ ಮಹತ್ತರ ಪಾತ್ರ ವಹಿಸಬಲ್ಲರು ಎಂದು ಆಶಾವಾದ ವ್ಯಕ್ತಪಡಿಸಿದರು.

ದಶಕಗಳ ಕಾಲ ಆಳ್ವಿಕೆ ಮಾಡಿದರೂ ಕಾಂಗ್ರೆಸ್ ಈ ದೇಶದ ಆರ್ಥಿಕತೆಯನ್ನು ಕೇವಲ 2 ಟ್ರಿಲಿಯನ್ ಮಟ್ಟಕ್ಕೆ ಕೊಂಡೊಯ್ಯಲಷ್ಟೇ ಶಕ್ತವಾಯಿತು. ಆದರೆ ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರ್ಕಾರವು ಕೇವಲ 5 ವರ್ಷಗಳಲ್ಲಿ ಅದನ್ನು 3 ಟ್ರಿಲಿಯನ್ ಮೊತ್ತಕ್ಕೆ ಒಯ್ದಿದೆ ಎಂದ ಶಾ, 60 ವರ್ಷಗಳಲ್ಲಿ ದೇಶದ ಆರ್ಥಿಕತೆ ಸುಧಾರಿಸಲು ಏನೂ ಮಾಡಲಾಗದವರು ಈಗ ಪ್ರಸ್ತುತ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

 

 

 

Vishwa News 24

Recent Posts

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

3 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

17 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

39 minutes ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

50 minutes ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 hour ago

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…

1 hour ago