ಇಂದು ನವದೆಹಲಿಯಲ್ಲಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.
ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…