Featured

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ‘ಡೊಳ್ಳು’ ಕನ್ನಡದ ಅತ್ಯುತ್ತಮ ಚಿತ್ರ – Vishwanews24

ಅತ್ಯುತ್ತಮ ಪರಿಸರ ಕಾಳಜಿ ಚಿತ್ರ : ತಲೆದಂಡ

ಅತ್ಯುತ್ತಮ ಲೋಕೆಷನ್ ಸೌಂಡ್ ಡಿಸೈನ್ ಚಿತ್ರ : ಡೊಳ್ಳು

ಅತ್ಯುತ್ತಮ ಕಲೆ ಮತ್ತು ಸಾಂಸ್ಕೃತಿಕ ಚಿತ್ರ : ನಾದದ ನವನೀತ

ಅತ್ಯುತ್ತಮ ಪ್ರಾದೇಶಿಕ ಸಿನಿಮಾ : ಡೊಳ್ಳು

ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ : ಜೀಟಿಗೆ

ಇಂದು ನವದೆಹಲಿಯಲ್ಲಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ. ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ, ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ, ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

6 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

7 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago