Featured

7 ದಿನ ಮಣ್ಣಿನಡಿ ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದ ಗೋಮಾತೆಯ ರಕ್ಷಣೆ..


ಮಡಿಕೇರಿ, : ಭೀಕರ ಜಲ ಪ್ರವಾಹದಿಂದ ತತ್ತರಿಸಿಹೋಗಿದ್ದ ಕೊಡಗು ಜಿಲ್ಲೆಯಲ್ಲಿ  ಮಳೆ ಇಳಿಮುಖವಾಗಿದ್ದು, ಸಾಕು ಪ್ರಾಣಿಗಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಪ್ರಾಣಿ ದಯಾ ಸಂಘಟನೆಗಳು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಕಾರ್ಯಕರ್ತರು ಸಾಕು ಪ್ರಾಣಿಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಮಡಿಕೇರಿ ತಾಲೂಕಿನಲ್ಲಿ ಪವಾಡ ಸದೃಶ ಘಟನೆಯೊಂದು ನಡೆದಿದೆ.

ಮಡಿಕೇರಿ ತಾಲೂಕಿನ ಕಾಲೂರು ಎಂಬ ಪುಟ್ಟ ಗ್ರಾಮದಲ್ಲಿ ಬೆಟ್ಟ ಕುಸಿದು ಗೋಮಾತೆಯೊಂದು ಕಳೆದ 7 ದಿನಗಳಿಂದ ಮಣ್ಣಿನಡಿ ಸಿಲುಕಿತ್ತು. ಮಾತ್ರವಲ್ಲ, ಗೋವು ಕೆಸರಿನಲ್ಲಿ ಹೂತು ಹೋಗಿತ್ತು. ಆದರೆ ಇದೀಗ ಮಣ್ಣಿನಲ್ಲಿ 7 ದಿನಗಳಿಂದ ಹೂತು ಹೋಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಮಾತೆ ಗೋವಿನ ರಕ್ಷಣೆಯನ್ನು ಮಾಡಿ ಮರುಜೀವ ನೀಡಲಾಗಿದೆ.

ಬೆಟ್ಟ ಕುಸಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿತ್ತು. ಮಣ್ಣಿನ ರಾಶಿಯಲ್ಲಿ ಹಸುವಿನ ತಲೆ ಮಾತ್ರ ಕಾಣಿಸುತ್ತಿತ್ತು. ಹುಲ್ಲು, ನೀರು, ಆಹಾರ ಯಾವುದು ಇಲ್ಲದೇ ಕೇವಲ ಕಣ್ಣು ಮಾತ್ರ ಮಿಟುಕಿಸುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಾತೆ ಗೋವನ್ನು ರಕ್ಷಿಸಿದ್ದಾರೆ. ಗಾಯಗೊಂಡಿರುವ ಹಸುವಿಗೆ ಚಿಕಿತ್ಸೆ ನೀಡಿ, ನೋಡಿಕೊಳ್ಳುತ್ತಿದ್ದಾರೆ.

ನಡುಗಡ್ಡೆಯಂತಾಗಿರುವ ಕೊಡಗಿನಲ್ಲಿ ಗುಡ್ಡಗಳು, ಮುರಿದು ಬಿದ್ದಿರುವ ಮನೆಗಳು, ಕೆಸರಿನಲ್ಲಿ ಸಿಲುಕಿದ್ದ ಪ್ರಾಣಿಗಳ ರಕ್ಷಣೆಯ ಕಾರ್ಯ ಭರದಿಂದ ನಡೆಯುತ್ತಿದೆ.  

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

18 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

55 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

1 hour ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago