ಮಡಿಕೇರಿ, : ಭೀಕರ ಜಲ ಪ್ರವಾಹದಿಂದ ತತ್ತರಿಸಿಹೋಗಿದ್ದ ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದ್ದು, ಸಾಕು ಪ್ರಾಣಿಗಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಪ್ರಾಣಿ ದಯಾ ಸಂಘಟನೆಗಳು, ಪ್ರಾಣಿ ಕಲ್ಯಾಣ ಸಂಸ್ಥೆಗಳ ಕಾರ್ಯಕರ್ತರು ಸಾಕು ಪ್ರಾಣಿಗಳನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ನಡುವೆ ಮಡಿಕೇರಿ ತಾಲೂಕಿನಲ್ಲಿ ಪವಾಡ ಸದೃಶ ಘಟನೆಯೊಂದು ನಡೆದಿದೆ.
ಮಡಿಕೇರಿ ತಾಲೂಕಿನ ಕಾಲೂರು ಎಂಬ ಪುಟ್ಟ ಗ್ರಾಮದಲ್ಲಿ ಬೆಟ್ಟ ಕುಸಿದು ಗೋಮಾತೆಯೊಂದು ಕಳೆದ 7 ದಿನಗಳಿಂದ ಮಣ್ಣಿನಡಿ ಸಿಲುಕಿತ್ತು. ಮಾತ್ರವಲ್ಲ, ಗೋವು ಕೆಸರಿನಲ್ಲಿ ಹೂತು ಹೋಗಿತ್ತು. ಆದರೆ ಇದೀಗ ಮಣ್ಣಿನಲ್ಲಿ 7 ದಿನಗಳಿಂದ ಹೂತು ಹೋಗಿ ಜೀವನ್ಮರಣ ಸ್ಥಿತಿಯಲ್ಲಿದ್ದ ಮಾತೆ ಗೋವಿನ ರಕ್ಷಣೆಯನ್ನು ಮಾಡಿ ಮರುಜೀವ ನೀಡಲಾಗಿದೆ.
ಬೆಟ್ಟ ಕುಸಿದು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿತ್ತು. ಮಣ್ಣಿನ ರಾಶಿಯಲ್ಲಿ ಹಸುವಿನ ತಲೆ ಮಾತ್ರ ಕಾಣಿಸುತ್ತಿತ್ತು. ಹುಲ್ಲು, ನೀರು, ಆಹಾರ ಯಾವುದು ಇಲ್ಲದೇ ಕೇವಲ ಕಣ್ಣು ಮಾತ್ರ ಮಿಟುಕಿಸುತ್ತಿತ್ತು. ಇದನ್ನು ಕಂಡ ಗ್ರಾಮಸ್ಥರು ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮಾತೆ ಗೋವನ್ನು ರಕ್ಷಿಸಿದ್ದಾರೆ. ಗಾಯಗೊಂಡಿರುವ ಹಸುವಿಗೆ ಚಿಕಿತ್ಸೆ ನೀಡಿ, ನೋಡಿಕೊಳ್ಳುತ್ತಿದ್ದಾರೆ.
ನಡುಗಡ್ಡೆಯಂತಾಗಿರುವ ಕೊಡಗಿನಲ್ಲಿ ಗುಡ್ಡಗಳು, ಮುರಿದು ಬಿದ್ದಿರುವ ಮನೆಗಳು, ಕೆಸರಿನಲ್ಲಿ ಸಿಲುಕಿದ್ದ ಪ್ರಾಣಿಗಳ ರಕ್ಷಣೆಯ ಕಾರ್ಯ ಭರದಿಂದ ನಡೆಯುತ್ತಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…