Featured

70 ದಿನಗಳಲ್ಲಿ 44 ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ – Vishwanews24

ನವದೆಹಲಿ,: 2019 ಆರಂಭವಾದಾಗಿನಿಂದ ಈವರೆಗೆ ಅಂದರೆ 70 ದಿನಗಳಲ್ಲಿ ಭಾರತ 44 ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ಭಾರತೀಯ ಸೇನಾಧಿಕಾರಿಗಳು ಸ್ಪಷ್ಟಪಡಿಸಿವೆ.

ದೆಹಲಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸೇನಾಧಿಕಾರಿಗಳು, 70 ದಿನಗಳಲ್ಲಿ ಭಾರತೀಯ ಸೇನಾಪಡೆ ಒಂದಲ್ಲ, ಎರಡಲ್ಲ 44 ಮಂದಿ ಉಗ್ರರನ್ನು ಹೊಡೆದುರುಳಿಸಿದೆ. ಇದು ಭಾರತೀಯ ಸೇನೆಯ ಬಲ ಎಂದು ವಿವರಿಸಿದರು. ಇನ್ನು 2019 ಆರಂಭವಾದಾಗಿನಿಂದ ಈವರೆಗೆ ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿನಿಯಂತ್ರಣ ರೇಖೆಯಲ್ಲಿ ಬರೋಬರಿ 478 ಬಾರಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆ ದಿಟ್ಟವಾಗಿ ಎದುರಿಸಿದೆ ಎಂದರು.

ಇನ್ನು ಫೆ.14 ರಂದು ಪುಲ್ವಾಮಾದಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಕಾರಣವಾಗಿರುವ ಜೈಶ್-ಇ-ಮೊಹಮದ್ ಸಂಘಟನೆ ಉಗ್ರರನ್ನೇ ಸೇನೆ ಹೆಚ್ಚಾಗಿ ಹೊಡೆದುರುಳಿಸಿದೆ. 70 ದಿನಗಳ ಅವಧಿಯಲ್ಲಿ ಭಾರತೀಯ ಸೇನಾಪಡೆ 44 ಉಗ್ರರನ್ನು ಹೊಡೆದುರುಳಿಸಲಾಗಿದೆ. ಆದರೆ, ದುರಾದೃಷ್ಟವಶಾತ್ ಇದಕ್ಕಿಂತ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಾವು ಕಳೆದುಕೊಂಡಿದ್ದೇವೆ. ಪುಲ್ವಾಮಾ ದಾಳಿಗೆ ಹುತಾತ್ಮರಾದ ಸೈನಿಕರು ಸೇರಿ 50ಕ್ಕೂ ಹೆಚ್ಚು ಸೈನಿಕರು 70 ದಿನಗಳಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದರು. ಕಳೆದ 21 ದಿನಗಳ ಅಂತರದಲ್ಲಿ 18 ಉಗ್ರರನ್ನು ಹತ್ಯೆಗೈದಿದ್ದು, ಅದರಲ್ಲಿ 14 ಜೈಶ್-ಇ-ಮೊಹಮದ್ ಸಂಘಟನೆಯವರು ಸೇರಿದ್ದಾರೆ. ಈ 14 ಮಂದಿಯ ಪೈಕಿ 6 ಮಂದಿ ಸಂಘಟನೆಯ ಕಮಾಂಡರ್ ಗಳಾಗಿದ್ದಾರೆಂದು ಸೇನಾಧಿಕಾರಿಗಳು ವಿವರಿಸಿದರು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

9 minutes ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

4 hours ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

8 hours ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

9 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

9 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

9 hours ago