Featured

70 ದಿನಗಳಲ್ಲಿ 44 ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ – Vishwanews24

ನವದೆಹಲಿ,: 2019 ಆರಂಭವಾದಾಗಿನಿಂದ ಈವರೆಗೆ ಅಂದರೆ 70 ದಿನಗಳಲ್ಲಿ ಭಾರತ 44 ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ಭಾರತೀಯ ಸೇನಾಧಿಕಾರಿಗಳು ಸ್ಪಷ್ಟಪಡಿಸಿವೆ.

ದೆಹಲಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸೇನಾಧಿಕಾರಿಗಳು, 70 ದಿನಗಳಲ್ಲಿ ಭಾರತೀಯ ಸೇನಾಪಡೆ ಒಂದಲ್ಲ, ಎರಡಲ್ಲ 44 ಮಂದಿ ಉಗ್ರರನ್ನು ಹೊಡೆದುರುಳಿಸಿದೆ. ಇದು ಭಾರತೀಯ ಸೇನೆಯ ಬಲ ಎಂದು ವಿವರಿಸಿದರು. ಇನ್ನು 2019 ಆರಂಭವಾದಾಗಿನಿಂದ ಈವರೆಗೆ ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿನಿಯಂತ್ರಣ ರೇಖೆಯಲ್ಲಿ ಬರೋಬರಿ 478 ಬಾರಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆ ದಿಟ್ಟವಾಗಿ ಎದುರಿಸಿದೆ ಎಂದರು.

ಇನ್ನು ಫೆ.14 ರಂದು ಪುಲ್ವಾಮಾದಲ್ಲಿ ನಡೆದ ವಿಧ್ವಂಸಕ ಕೃತ್ಯಕ್ಕೆ ಕಾರಣವಾಗಿರುವ ಜೈಶ್-ಇ-ಮೊಹಮದ್ ಸಂಘಟನೆ ಉಗ್ರರನ್ನೇ ಸೇನೆ ಹೆಚ್ಚಾಗಿ ಹೊಡೆದುರುಳಿಸಿದೆ. 70 ದಿನಗಳ ಅವಧಿಯಲ್ಲಿ ಭಾರತೀಯ ಸೇನಾಪಡೆ 44 ಉಗ್ರರನ್ನು ಹೊಡೆದುರುಳಿಸಲಾಗಿದೆ. ಆದರೆ, ದುರಾದೃಷ್ಟವಶಾತ್ ಇದಕ್ಕಿಂತ ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಾವು ಕಳೆದುಕೊಂಡಿದ್ದೇವೆ. ಪುಲ್ವಾಮಾ ದಾಳಿಗೆ ಹುತಾತ್ಮರಾದ ಸೈನಿಕರು ಸೇರಿ 50ಕ್ಕೂ ಹೆಚ್ಚು ಸೈನಿಕರು 70 ದಿನಗಳಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದರು. ಕಳೆದ 21 ದಿನಗಳ ಅಂತರದಲ್ಲಿ 18 ಉಗ್ರರನ್ನು ಹತ್ಯೆಗೈದಿದ್ದು, ಅದರಲ್ಲಿ 14 ಜೈಶ್-ಇ-ಮೊಹಮದ್ ಸಂಘಟನೆಯವರು ಸೇರಿದ್ದಾರೆ. ಈ 14 ಮಂದಿಯ ಪೈಕಿ 6 ಮಂದಿ ಸಂಘಟನೆಯ ಕಮಾಂಡರ್ ಗಳಾಗಿದ್ದಾರೆಂದು ಸೇನಾಧಿಕಾರಿಗಳು ವಿವರಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago